23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

ಬೆಳ್ತಂಗಡಿ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿದ ಘಟನೆ ಅತ್ಯಂತ ಅಮಾನವೀಯವಾದುದು. ಇದು ನಾಗರಿಕ ಸಮಾಜದ ಅನಾಗರಿಕ ವರ್ತನೆಯ ಪರಮಾವಧಿಯಾಗಿದೆ. ವಿದ್ಯಾವಂತ ಜಿಲ್ಲೆಯಲ್ಲಿ , ಅಜ್ಞಾನಿಗಳು ಇನ್ನೂ ಜೀವಂತವಿರುವುದಕ್ಕೆ ಉತ್ತಮ ಉದಾಹರಣೆ. ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡುವ ಬದಲಾಗಿ ಘಟನೆಯನ್ನು ತಡೆಯಲು ಪ್ರಯತ್ನಿಸದಿರುವುದು ಮಾನವೀಯತೆ ಸತ್ತಿರುವುದಕ್ಕೆ ಸಾಕ್ಷಿ. ಘಟನೆಯಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮಲ್ಪೆ ಪೋಲಿಸರ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು . ಘಟನೆ ನಡೆದು ಒಂದು ದಿನ ತಡವಾಗಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ.

ಈ ಹಿಂದೆ ಬೆತ್ತಲೆ ಪ್ರಕರಣದಲ್ಲಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಘಟನೆಯ ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸುವ ಮೂಲಕ ಮತ್ತೊಮ್ಮೆ ಕರಾವಳಿಗರು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಬೇಕು. ಶೇಖರ್ ಲಾಯಿಲಸಂಚಾಲಕಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!