22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

ಬೆಳ್ತಂಗಡಿ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿದ ಘಟನೆ ಅತ್ಯಂತ ಅಮಾನವೀಯವಾದುದು. ಇದು ನಾಗರಿಕ ಸಮಾಜದ ಅನಾಗರಿಕ ವರ್ತನೆಯ ಪರಮಾವಧಿಯಾಗಿದೆ. ವಿದ್ಯಾವಂತ ಜಿಲ್ಲೆಯಲ್ಲಿ , ಅಜ್ಞಾನಿಗಳು ಇನ್ನೂ ಜೀವಂತವಿರುವುದಕ್ಕೆ ಉತ್ತಮ ಉದಾಹರಣೆ. ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡುವ ಬದಲಾಗಿ ಘಟನೆಯನ್ನು ತಡೆಯಲು ಪ್ರಯತ್ನಿಸದಿರುವುದು ಮಾನವೀಯತೆ ಸತ್ತಿರುವುದಕ್ಕೆ ಸಾಕ್ಷಿ. ಘಟನೆಯಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮಲ್ಪೆ ಪೋಲಿಸರ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು . ಘಟನೆ ನಡೆದು ಒಂದು ದಿನ ತಡವಾಗಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ.

ಈ ಹಿಂದೆ ಬೆತ್ತಲೆ ಪ್ರಕರಣದಲ್ಲಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಘಟನೆಯ ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸುವ ಮೂಲಕ ಮತ್ತೊಮ್ಮೆ ಕರಾವಳಿಗರು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಬೇಕು. ಶೇಖರ್ ಲಾಯಿಲಸಂಚಾಲಕಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!