23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಚಿರತೆ ಓಡಾಟ ಕಂಡು ಬಂದಿದೆ.‌ ಮಾ.18 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಚಂದ್ಕೂರು ರಸ್ತೆಯ ನಿರ್ಪರಿ ಎಂಬಲ್ಲಿ ಸ್ಥಳೀಯರಾದ ಸಿಪ್ರಿಯನ್ ಎಂಬವರು ಮನೆ ಬಳಿಯ ರಸ್ತೆಯಲ್ಲಿ ಬರುತಿದ್ದಾಗ ದೊಡ್ಡ ಗಾತ್ರದ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಪಕ್ಕದ ಮನೆಯ ಸುನೀಲ್ ಎಂಬವರಿಗೆ ವಿಷಯ ತಿಳಿಸಿದಾಗ ಅವರು ಸ್ಥಳೀಯ ಪಂಚಾಯತ್ ಸದಸ್ಯ ಪ್ರಸಾದ್ ಅವರಿಗೆ ಈ ಬಗ್ಗೆ ಪೋನ್ ಮೂಲಕ ತಿಳಿಸಿದ್ದು, ಅವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತು‌ ಪತ್ತೆಯಾಗಿದೆ.‌

ಈ ಬಗ್ಗೆ ಹಂದೆವೂರು, ಅಮ್ಮನಂಗಡಿ, ನಿರ್ಪರಿ ಭಾಗದ ಕೆಲವು ಮನೆಗಳಿಗೆ ತೆರಳಿ ರಾತ್ರಿ ಹೊತ್ತು ಒಬ್ಬಂಟಿಯಾಗಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಅದಲ್ಲದೇ ಮತ್ತೊಮ್ಮೆ ಚಿರತೆ ಕಂಡು ಬಂದರೆ ಗೂಡು ಇಡುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದಾರೆ.‌ ಕಳೆದ ವರ್ಷ ಕೂಡ ಇದೇ ಸಮಯಗಳಲ್ಲಿ ಚಿರತೆ ಈ ಭಾಗದಲ್ಲಿ ಕಂಡು ಬಂದಿದ್ದು, ಕೆಲವು ಮನೆಗಳ ಸಾಕು ನಾಯಿಗಳನ್ನು ಹಿಡಿದಿದ್ದು ಮತ್ತೆ ಈ ಬಾರಿ ಚಿರತೆ ಸಂಚಾರ ಸ್ಥಳೀಯರನ್ನು ಚಿಂತೆಗೀಡು ಮಾಡಿದೆ.

Related posts

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya
error: Content is protected !!