22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಚಿರತೆ ಓಡಾಟ ಕಂಡು ಬಂದಿದೆ.‌ ಮಾ.18 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಚಂದ್ಕೂರು ರಸ್ತೆಯ ನಿರ್ಪರಿ ಎಂಬಲ್ಲಿ ಸ್ಥಳೀಯರಾದ ಸಿಪ್ರಿಯನ್ ಎಂಬವರು ಮನೆ ಬಳಿಯ ರಸ್ತೆಯಲ್ಲಿ ಬರುತಿದ್ದಾಗ ದೊಡ್ಡ ಗಾತ್ರದ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಪಕ್ಕದ ಮನೆಯ ಸುನೀಲ್ ಎಂಬವರಿಗೆ ವಿಷಯ ತಿಳಿಸಿದಾಗ ಅವರು ಸ್ಥಳೀಯ ಪಂಚಾಯತ್ ಸದಸ್ಯ ಪ್ರಸಾದ್ ಅವರಿಗೆ ಈ ಬಗ್ಗೆ ಪೋನ್ ಮೂಲಕ ತಿಳಿಸಿದ್ದು, ಅವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತು‌ ಪತ್ತೆಯಾಗಿದೆ.‌

ಈ ಬಗ್ಗೆ ಹಂದೆವೂರು, ಅಮ್ಮನಂಗಡಿ, ನಿರ್ಪರಿ ಭಾಗದ ಕೆಲವು ಮನೆಗಳಿಗೆ ತೆರಳಿ ರಾತ್ರಿ ಹೊತ್ತು ಒಬ್ಬಂಟಿಯಾಗಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಅದಲ್ಲದೇ ಮತ್ತೊಮ್ಮೆ ಚಿರತೆ ಕಂಡು ಬಂದರೆ ಗೂಡು ಇಡುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದಾರೆ.‌ ಕಳೆದ ವರ್ಷ ಕೂಡ ಇದೇ ಸಮಯಗಳಲ್ಲಿ ಚಿರತೆ ಈ ಭಾಗದಲ್ಲಿ ಕಂಡು ಬಂದಿದ್ದು, ಕೆಲವು ಮನೆಗಳ ಸಾಕು ನಾಯಿಗಳನ್ನು ಹಿಡಿದಿದ್ದು ಮತ್ತೆ ಈ ಬಾರಿ ಚಿರತೆ ಸಂಚಾರ ಸ್ಥಳೀಯರನ್ನು ಚಿಂತೆಗೀಡು ಮಾಡಿದೆ.

Related posts

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya
error: Content is protected !!