September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಚಿರತೆ ಓಡಾಟ ಕಂಡು ಬಂದಿದೆ.‌ ಮಾ.18 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಚಂದ್ಕೂರು ರಸ್ತೆಯ ನಿರ್ಪರಿ ಎಂಬಲ್ಲಿ ಸ್ಥಳೀಯರಾದ ಸಿಪ್ರಿಯನ್ ಎಂಬವರು ಮನೆ ಬಳಿಯ ರಸ್ತೆಯಲ್ಲಿ ಬರುತಿದ್ದಾಗ ದೊಡ್ಡ ಗಾತ್ರದ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಪಕ್ಕದ ಮನೆಯ ಸುನೀಲ್ ಎಂಬವರಿಗೆ ವಿಷಯ ತಿಳಿಸಿದಾಗ ಅವರು ಸ್ಥಳೀಯ ಪಂಚಾಯತ್ ಸದಸ್ಯ ಪ್ರಸಾದ್ ಅವರಿಗೆ ಈ ಬಗ್ಗೆ ಪೋನ್ ಮೂಲಕ ತಿಳಿಸಿದ್ದು, ಅವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತು‌ ಪತ್ತೆಯಾಗಿದೆ.‌

ಈ ಬಗ್ಗೆ ಹಂದೆವೂರು, ಅಮ್ಮನಂಗಡಿ, ನಿರ್ಪರಿ ಭಾಗದ ಕೆಲವು ಮನೆಗಳಿಗೆ ತೆರಳಿ ರಾತ್ರಿ ಹೊತ್ತು ಒಬ್ಬಂಟಿಯಾಗಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಅದಲ್ಲದೇ ಮತ್ತೊಮ್ಮೆ ಚಿರತೆ ಕಂಡು ಬಂದರೆ ಗೂಡು ಇಡುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದಾರೆ.‌ ಕಳೆದ ವರ್ಷ ಕೂಡ ಇದೇ ಸಮಯಗಳಲ್ಲಿ ಚಿರತೆ ಈ ಭಾಗದಲ್ಲಿ ಕಂಡು ಬಂದಿದ್ದು, ಕೆಲವು ಮನೆಗಳ ಸಾಕು ನಾಯಿಗಳನ್ನು ಹಿಡಿದಿದ್ದು ಮತ್ತೆ ಈ ಬಾರಿ ಚಿರತೆ ಸಂಚಾರ ಸ್ಥಳೀಯರನ್ನು ಚಿಂತೆಗೀಡು ಮಾಡಿದೆ.

Related posts

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ರವರು ‘ಬಸವಶ್ರೀ’ ಪ್ರಶಸ್ತಿಗೆ ಆಯ್ಕೆ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya
error: Content is protected !!