24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಚಿರತೆ ಓಡಾಟ ಕಂಡು ಬಂದಿದೆ.‌ ಮಾ.18 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಚಂದ್ಕೂರು ರಸ್ತೆಯ ನಿರ್ಪರಿ ಎಂಬಲ್ಲಿ ಸ್ಥಳೀಯರಾದ ಸಿಪ್ರಿಯನ್ ಎಂಬವರು ಮನೆ ಬಳಿಯ ರಸ್ತೆಯಲ್ಲಿ ಬರುತಿದ್ದಾಗ ದೊಡ್ಡ ಗಾತ್ರದ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಪಕ್ಕದ ಮನೆಯ ಸುನೀಲ್ ಎಂಬವರಿಗೆ ವಿಷಯ ತಿಳಿಸಿದಾಗ ಅವರು ಸ್ಥಳೀಯ ಪಂಚಾಯತ್ ಸದಸ್ಯ ಪ್ರಸಾದ್ ಅವರಿಗೆ ಈ ಬಗ್ಗೆ ಪೋನ್ ಮೂಲಕ ತಿಳಿಸಿದ್ದು, ಅವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತು‌ ಪತ್ತೆಯಾಗಿದೆ.‌

ಈ ಬಗ್ಗೆ ಹಂದೆವೂರು, ಅಮ್ಮನಂಗಡಿ, ನಿರ್ಪರಿ ಭಾಗದ ಕೆಲವು ಮನೆಗಳಿಗೆ ತೆರಳಿ ರಾತ್ರಿ ಹೊತ್ತು ಒಬ್ಬಂಟಿಯಾಗಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಅದಲ್ಲದೇ ಮತ್ತೊಮ್ಮೆ ಚಿರತೆ ಕಂಡು ಬಂದರೆ ಗೂಡು ಇಡುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದಾರೆ.‌ ಕಳೆದ ವರ್ಷ ಕೂಡ ಇದೇ ಸಮಯಗಳಲ್ಲಿ ಚಿರತೆ ಈ ಭಾಗದಲ್ಲಿ ಕಂಡು ಬಂದಿದ್ದು, ಕೆಲವು ಮನೆಗಳ ಸಾಕು ನಾಯಿಗಳನ್ನು ಹಿಡಿದಿದ್ದು ಮತ್ತೆ ಈ ಬಾರಿ ಚಿರತೆ ಸಂಚಾರ ಸ್ಥಳೀಯರನ್ನು ಚಿಂತೆಗೀಡು ಮಾಡಿದೆ.

Related posts

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya
error: Content is protected !!