37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವಿದ್ಯಾರ್ಥಿನಿಯೊಬ್ಬಳಿಗೆ ಪರಿಚಯಸ್ಥ ವೇಣೂರು ಶಿವಾಜಿನಗರ ಕಾಲೋನಿ ನಿವಾಸಿ ಆಸ್ಟಕ್ (27) ಎಂಬಾತ ಮಾ. 19ರಂದು ಮೂಡುಬಿದ್ರೆಯಿಂದ ವೇಣೂರಿಗೆ ಬಸ್ಸಿನಲ್ಲಿ ಬರುವಾಗ ಆಕೆ ಕುಳಿತಿದ್ದ ಸೀಟಿನ ಬಳಿ ನಿಂತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬ್ಯಾಗ್ ಎಳೆದು ತೊಂದರೆ ನೀಡಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಘಟನೆ ವಿವರ: ವೇಣೂರು ನಿವಾಸಿ ಆಸ್ಪಕ್‌ ಎಂಬಾತನು ವಿದ್ಯಾರ್ಥಿಯಲ್ಲಿ ಹೆಚ್ಚಾಗಿ ಕಾಣ ಸಿಕ್ಕಿದವನು ಮಾತನಾಡುತ್ತಿದ್ದು ಆತಾನ ವರ್ತನೆ ಸರಿಯಿಲ್ಲದ ಕಾರಣ ವಿದ್ಯಾರ್ಥಿ ಸುಮಾರು 6 ತಿಂಗಳಿನಿಂದ ಆತನಲ್ಲಿ ಮಾತನಾಡುವುದನ್ನು ಬಿಟ್ಟಿದ್ದರೂ ಕೂಡ ಆತನು ಆಕೆ ಕಾಲೇಜಿಗೆ ಹೋಗುವ ಸಮಯ ಆಕೆಯನ್ನು ಹಿಂಬಾಲಿಸುತ್ತಿದ್ದು ಈ ವಿಚಾರವನ್ನು ವಿದ್ಯಾರ್ಥಿ ಅವರ ಮನೆಯಲ್ಲಿ ತಿಳಿಸಿದ್ದು ಆಕೆಯ ಮನೆಯವರು ಆತನಲ್ಲಿ ಆಕೆಯನ್ನು ಹಿಂಬಾಲಿಸದಂತೆ ಬುದ್ದಿ ಮಾತು ಕೂಡ ಹೇಳಿರುತ್ತಾರೆ.

ಮಾ. 19 ರಂದು ವಿದ್ಯಾರ್ಥಿನಿ ಕಾಲೇಜಿಗೆ ಹೋದವರು ಸಂಜೆ ವೇಳೆ ಬಸ್ಸಿನಲ್ಲಿ ವೇಣೂರಿಗೆ ಬರುವರೇ ಮೂಡಬಿದ್ರೆಯಿಂದ ಬಸ್‌ ಹತ್ತಿದ ಸಮಯ ಆಸ್ಪಕ್‌ ಕೂಡ ಆಕೆಯನ್ನು ಹಿಂಬಾಲಿಸಿ ಅದೇ ಬಸ್‌ ಹತ್ತಿ ಆಕೆಯು ಕುಳಿತುಕೊಂಡ ಸೀಟ್‌ ನ ಬಳಿ ನಿಂತುಕೊಂಡಿದ್ದು , ಬಸ್‌ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿಗೆ ತಲುಪಿದ ವೇಳೆ ಆಸ್ಪಕನು ವಿದ್ಯಾರ್ಥಿಯನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಕಾಲೇಜ್‌ ಬ್ಯಾಗ್‌ ಎಳೆದು ತೊಂದರೆ ನೀಡಿರುತ್ತಾನೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!