23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವಿದ್ಯಾರ್ಥಿನಿಯೊಬ್ಬಳಿಗೆ ಪರಿಚಯಸ್ಥ ವೇಣೂರು ಶಿವಾಜಿನಗರ ಕಾಲೋನಿ ನಿವಾಸಿ ಆಸ್ಟಕ್ (27) ಎಂಬಾತ ಮಾ. 19ರಂದು ಮೂಡುಬಿದ್ರೆಯಿಂದ ವೇಣೂರಿಗೆ ಬಸ್ಸಿನಲ್ಲಿ ಬರುವಾಗ ಆಕೆ ಕುಳಿತಿದ್ದ ಸೀಟಿನ ಬಳಿ ನಿಂತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬ್ಯಾಗ್ ಎಳೆದು ತೊಂದರೆ ನೀಡಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಘಟನೆ ವಿವರ: ವೇಣೂರು ನಿವಾಸಿ ಆಸ್ಪಕ್‌ ಎಂಬಾತನು ವಿದ್ಯಾರ್ಥಿಯಲ್ಲಿ ಹೆಚ್ಚಾಗಿ ಕಾಣ ಸಿಕ್ಕಿದವನು ಮಾತನಾಡುತ್ತಿದ್ದು ಆತಾನ ವರ್ತನೆ ಸರಿಯಿಲ್ಲದ ಕಾರಣ ವಿದ್ಯಾರ್ಥಿ ಸುಮಾರು 6 ತಿಂಗಳಿನಿಂದ ಆತನಲ್ಲಿ ಮಾತನಾಡುವುದನ್ನು ಬಿಟ್ಟಿದ್ದರೂ ಕೂಡ ಆತನು ಆಕೆ ಕಾಲೇಜಿಗೆ ಹೋಗುವ ಸಮಯ ಆಕೆಯನ್ನು ಹಿಂಬಾಲಿಸುತ್ತಿದ್ದು ಈ ವಿಚಾರವನ್ನು ವಿದ್ಯಾರ್ಥಿ ಅವರ ಮನೆಯಲ್ಲಿ ತಿಳಿಸಿದ್ದು ಆಕೆಯ ಮನೆಯವರು ಆತನಲ್ಲಿ ಆಕೆಯನ್ನು ಹಿಂಬಾಲಿಸದಂತೆ ಬುದ್ದಿ ಮಾತು ಕೂಡ ಹೇಳಿರುತ್ತಾರೆ.

ಮಾ. 19 ರಂದು ವಿದ್ಯಾರ್ಥಿನಿ ಕಾಲೇಜಿಗೆ ಹೋದವರು ಸಂಜೆ ವೇಳೆ ಬಸ್ಸಿನಲ್ಲಿ ವೇಣೂರಿಗೆ ಬರುವರೇ ಮೂಡಬಿದ್ರೆಯಿಂದ ಬಸ್‌ ಹತ್ತಿದ ಸಮಯ ಆಸ್ಪಕ್‌ ಕೂಡ ಆಕೆಯನ್ನು ಹಿಂಬಾಲಿಸಿ ಅದೇ ಬಸ್‌ ಹತ್ತಿ ಆಕೆಯು ಕುಳಿತುಕೊಂಡ ಸೀಟ್‌ ನ ಬಳಿ ನಿಂತುಕೊಂಡಿದ್ದು , ಬಸ್‌ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿಗೆ ತಲುಪಿದ ವೇಳೆ ಆಸ್ಪಕನು ವಿದ್ಯಾರ್ಥಿಯನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಕಾಲೇಜ್‌ ಬ್ಯಾಗ್‌ ಎಳೆದು ತೊಂದರೆ ನೀಡಿರುತ್ತಾನೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya
error: Content is protected !!