ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವಿದ್ಯಾರ್ಥಿನಿಯೊಬ್ಬಳಿಗೆ ಪರಿಚಯಸ್ಥ ವೇಣೂರು ಶಿವಾಜಿನಗರ ಕಾಲೋನಿ ನಿವಾಸಿ ಆಸ್ಟಕ್ (27) ಎಂಬಾತ ಮಾ. 19ರಂದು ಮೂಡುಬಿದ್ರೆಯಿಂದ ವೇಣೂರಿಗೆ ಬಸ್ಸಿನಲ್ಲಿ ಬರುವಾಗ ಆಕೆ ಕುಳಿತಿದ್ದ ಸೀಟಿನ ಬಳಿ ನಿಂತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬ್ಯಾಗ್ ಎಳೆದು ತೊಂದರೆ ನೀಡಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಘಟನೆ ವಿವರ: ವೇಣೂರು ನಿವಾಸಿ ಆಸ್ಪಕ್‌ ಎಂಬಾತನು ವಿದ್ಯಾರ್ಥಿಯಲ್ಲಿ ಹೆಚ್ಚಾಗಿ ಕಾಣ ಸಿಕ್ಕಿದವನು ಮಾತನಾಡುತ್ತಿದ್ದು ಆತಾನ ವರ್ತನೆ ಸರಿಯಿಲ್ಲದ ಕಾರಣ ವಿದ್ಯಾರ್ಥಿ ಸುಮಾರು 6 ತಿಂಗಳಿನಿಂದ ಆತನಲ್ಲಿ ಮಾತನಾಡುವುದನ್ನು ಬಿಟ್ಟಿದ್ದರೂ ಕೂಡ ಆತನು ಆಕೆ ಕಾಲೇಜಿಗೆ ಹೋಗುವ ಸಮಯ ಆಕೆಯನ್ನು ಹಿಂಬಾಲಿಸುತ್ತಿದ್ದು ಈ ವಿಚಾರವನ್ನು ವಿದ್ಯಾರ್ಥಿ ಅವರ ಮನೆಯಲ್ಲಿ ತಿಳಿಸಿದ್ದು ಆಕೆಯ ಮನೆಯವರು ಆತನಲ್ಲಿ ಆಕೆಯನ್ನು ಹಿಂಬಾಲಿಸದಂತೆ ಬುದ್ದಿ ಮಾತು ಕೂಡ ಹೇಳಿರುತ್ತಾರೆ.

ಮಾ. 19 ರಂದು ವಿದ್ಯಾರ್ಥಿನಿ ಕಾಲೇಜಿಗೆ ಹೋದವರು ಸಂಜೆ ವೇಳೆ ಬಸ್ಸಿನಲ್ಲಿ ವೇಣೂರಿಗೆ ಬರುವರೇ ಮೂಡಬಿದ್ರೆಯಿಂದ ಬಸ್‌ ಹತ್ತಿದ ಸಮಯ ಆಸ್ಪಕ್‌ ಕೂಡ ಆಕೆಯನ್ನು ಹಿಂಬಾಲಿಸಿ ಅದೇ ಬಸ್‌ ಹತ್ತಿ ಆಕೆಯು ಕುಳಿತುಕೊಂಡ ಸೀಟ್‌ ನ ಬಳಿ ನಿಂತುಕೊಂಡಿದ್ದು , ಬಸ್‌ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿಗೆ ತಲುಪಿದ ವೇಳೆ ಆಸ್ಪಕನು ವಿದ್ಯಾರ್ಥಿಯನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಕಾಲೇಜ್‌ ಬ್ಯಾಗ್‌ ಎಳೆದು ತೊಂದರೆ ನೀಡಿರುತ್ತಾನೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya
error: Content is protected !!