37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಸಂಜಾತೆ ಸುನೀತ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ರವರು ಬಾಹ್ಯಾಕಾಶ ದಿಂದ ನಿನ್ನೆ ಬೆಳಿಗ್ಗೆ 3.27 ಕ್ಕೆ ಭೂಮಿಗೆ ಬಂದಿಳಿದ ಐತಿಹಾಸಿಕ ಸಾಹಸದ ಕ್ಷಣದ ದೃಶ್ಯಗಳನ್ನು ಎಲ್ಲಾ ಮಕ್ಕಳಿಗೂ ತೋರಿಸಿ , ಸಾಧನೆ ತೋರಿದ ಈ ಸಾಧಕರಿಗೆ ಸಮಸ್ತ ವಿದ್ವತ್ ವಿದ್ಯಾರ್ಥಿ ಹಾಗೂ ಬೋಧಕ ಸಿಬ್ಬಂದಿ ಗೌರವ ಸೆಲ್ಯೂಟ್ ಸಮರ್ಪಣೆ ಮಾಡಿ, ಮಾ.20 ರಮದು ನಡೆದ ಕಾರ್ಯಕ್ರಮದಲ್ಲಿ ಅವರ ಸಾಧನೆಯನ್ನು ಕೊಂಡಾಡಿದರು.

ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಕ್ಕಳು ಅಭ್ಯಾಸ ಮಾಡುವ ಭೌತಶಾಸ್ತ್ರ ದ ಥಿಯರಿ ಹೇಗೆ ಉಪಯೋಗಿಸಲ್ಪಡುತ್ತದೆ , ಭೌತಶಾಸ್ತ್ರ ವಿಷಯ ತಜ್ಞ, ಅತುಕುರಿ ನರೇಶ್ ವಿವರಿಸಿದರೆ, ರಸಾಯನ ಶಾಸ್ತ್ರ ದಲ್ಲಿ ಮಕ್ಕಳು ಕಲಿಯುವ ಥಿಯರಿಗಳು ಹೇಗೆ ಉಪಯೋಗಿಸಲ್ಪಡುತ್ತವೆ ಎಂಬುದನ್ನು, ರಸಾಯನಶಾಸ್ತ್ರ ವಿಷಯತಜ್ಞ, ಪ್ರಥಾಪ್ ದೊಡ್ಡಮನೆ ಯವರು ವಿವರಿಸಿದರು. ವೈಜ್ಞಾನಿಕ ಕುತೂಹಲ ಮೂಡಿಸುವ ಪ್ರಮುಖ ಉದ್ದೇಶ ಹೊಂದಿರುವ ಇನ್ಸ್ಪೈರ್ ವಿದ್ವತ್ ವೇದಿಕೆ ಈ ಕಾರ್ಯಕ್ರಮ ಆಯೋಜಿಸಿತ್ತು.

ನಂತರ ಗ್ರೂಪ್ ಕ್ಯಾಪ್ಟನ್ ರಾಹುಲ್ ಸ್ವಾಮಿ ಗೌರವ ವಂದನೆಯ ಕಾರ್ಯಕ್ರಮ ನೆರವೇರಿಸಿದರು.

ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಯವರು ಸುನೀತಾ ವಿಲಿಯಮ್ಸ್ ರವರ ಸಾಹಸಗಾಥೆಯ ವಿವರ ನೀಡಿ, ಪ್ರತಿಭಾವಂತರಿಗಿರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು . ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಉಪಸ್ಥಿತರಿದ್ದರು. ಕು. ಅನುಶ್ರೀ, ಜೀವಶಾಸ್ತ್ರ ಉಪನ್ಯಾಸಕಿ, ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya
error: Content is protected !!