22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಸಂಜಾತೆ ಸುನೀತ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ರವರು ಬಾಹ್ಯಾಕಾಶ ದಿಂದ ನಿನ್ನೆ ಬೆಳಿಗ್ಗೆ 3.27 ಕ್ಕೆ ಭೂಮಿಗೆ ಬಂದಿಳಿದ ಐತಿಹಾಸಿಕ ಸಾಹಸದ ಕ್ಷಣದ ದೃಶ್ಯಗಳನ್ನು ಎಲ್ಲಾ ಮಕ್ಕಳಿಗೂ ತೋರಿಸಿ , ಸಾಧನೆ ತೋರಿದ ಈ ಸಾಧಕರಿಗೆ ಸಮಸ್ತ ವಿದ್ವತ್ ವಿದ್ಯಾರ್ಥಿ ಹಾಗೂ ಬೋಧಕ ಸಿಬ್ಬಂದಿ ಗೌರವ ಸೆಲ್ಯೂಟ್ ಸಮರ್ಪಣೆ ಮಾಡಿ, ಮಾ.20 ರಮದು ನಡೆದ ಕಾರ್ಯಕ್ರಮದಲ್ಲಿ ಅವರ ಸಾಧನೆಯನ್ನು ಕೊಂಡಾಡಿದರು.

ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಕ್ಕಳು ಅಭ್ಯಾಸ ಮಾಡುವ ಭೌತಶಾಸ್ತ್ರ ದ ಥಿಯರಿ ಹೇಗೆ ಉಪಯೋಗಿಸಲ್ಪಡುತ್ತದೆ , ಭೌತಶಾಸ್ತ್ರ ವಿಷಯ ತಜ್ಞ, ಅತುಕುರಿ ನರೇಶ್ ವಿವರಿಸಿದರೆ, ರಸಾಯನ ಶಾಸ್ತ್ರ ದಲ್ಲಿ ಮಕ್ಕಳು ಕಲಿಯುವ ಥಿಯರಿಗಳು ಹೇಗೆ ಉಪಯೋಗಿಸಲ್ಪಡುತ್ತವೆ ಎಂಬುದನ್ನು, ರಸಾಯನಶಾಸ್ತ್ರ ವಿಷಯತಜ್ಞ, ಪ್ರಥಾಪ್ ದೊಡ್ಡಮನೆ ಯವರು ವಿವರಿಸಿದರು. ವೈಜ್ಞಾನಿಕ ಕುತೂಹಲ ಮೂಡಿಸುವ ಪ್ರಮುಖ ಉದ್ದೇಶ ಹೊಂದಿರುವ ಇನ್ಸ್ಪೈರ್ ವಿದ್ವತ್ ವೇದಿಕೆ ಈ ಕಾರ್ಯಕ್ರಮ ಆಯೋಜಿಸಿತ್ತು.

ನಂತರ ಗ್ರೂಪ್ ಕ್ಯಾಪ್ಟನ್ ರಾಹುಲ್ ಸ್ವಾಮಿ ಗೌರವ ವಂದನೆಯ ಕಾರ್ಯಕ್ರಮ ನೆರವೇರಿಸಿದರು.

ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಯವರು ಸುನೀತಾ ವಿಲಿಯಮ್ಸ್ ರವರ ಸಾಹಸಗಾಥೆಯ ವಿವರ ನೀಡಿ, ಪ್ರತಿಭಾವಂತರಿಗಿರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು . ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಉಪಸ್ಥಿತರಿದ್ದರು. ಕು. ಅನುಶ್ರೀ, ಜೀವಶಾಸ್ತ್ರ ಉಪನ್ಯಾಸಕಿ, ಕಾರ್ಯಕ್ರಮ ನಿರೂಪಿಸಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya
error: Content is protected !!