September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಸಂಜಾತೆ ಸುನೀತ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ರವರು ಬಾಹ್ಯಾಕಾಶ ದಿಂದ ನಿನ್ನೆ ಬೆಳಿಗ್ಗೆ 3.27 ಕ್ಕೆ ಭೂಮಿಗೆ ಬಂದಿಳಿದ ಐತಿಹಾಸಿಕ ಸಾಹಸದ ಕ್ಷಣದ ದೃಶ್ಯಗಳನ್ನು ಎಲ್ಲಾ ಮಕ್ಕಳಿಗೂ ತೋರಿಸಿ , ಸಾಧನೆ ತೋರಿದ ಈ ಸಾಧಕರಿಗೆ ಸಮಸ್ತ ವಿದ್ವತ್ ವಿದ್ಯಾರ್ಥಿ ಹಾಗೂ ಬೋಧಕ ಸಿಬ್ಬಂದಿ ಗೌರವ ಸೆಲ್ಯೂಟ್ ಸಮರ್ಪಣೆ ಮಾಡಿ, ಮಾ.20 ರಮದು ನಡೆದ ಕಾರ್ಯಕ್ರಮದಲ್ಲಿ ಅವರ ಸಾಧನೆಯನ್ನು ಕೊಂಡಾಡಿದರು.

ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಕ್ಕಳು ಅಭ್ಯಾಸ ಮಾಡುವ ಭೌತಶಾಸ್ತ್ರ ದ ಥಿಯರಿ ಹೇಗೆ ಉಪಯೋಗಿಸಲ್ಪಡುತ್ತದೆ , ಭೌತಶಾಸ್ತ್ರ ವಿಷಯ ತಜ್ಞ, ಅತುಕುರಿ ನರೇಶ್ ವಿವರಿಸಿದರೆ, ರಸಾಯನ ಶಾಸ್ತ್ರ ದಲ್ಲಿ ಮಕ್ಕಳು ಕಲಿಯುವ ಥಿಯರಿಗಳು ಹೇಗೆ ಉಪಯೋಗಿಸಲ್ಪಡುತ್ತವೆ ಎಂಬುದನ್ನು, ರಸಾಯನಶಾಸ್ತ್ರ ವಿಷಯತಜ್ಞ, ಪ್ರಥಾಪ್ ದೊಡ್ಡಮನೆ ಯವರು ವಿವರಿಸಿದರು. ವೈಜ್ಞಾನಿಕ ಕುತೂಹಲ ಮೂಡಿಸುವ ಪ್ರಮುಖ ಉದ್ದೇಶ ಹೊಂದಿರುವ ಇನ್ಸ್ಪೈರ್ ವಿದ್ವತ್ ವೇದಿಕೆ ಈ ಕಾರ್ಯಕ್ರಮ ಆಯೋಜಿಸಿತ್ತು.

ನಂತರ ಗ್ರೂಪ್ ಕ್ಯಾಪ್ಟನ್ ರಾಹುಲ್ ಸ್ವಾಮಿ ಗೌರವ ವಂದನೆಯ ಕಾರ್ಯಕ್ರಮ ನೆರವೇರಿಸಿದರು.

ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಯವರು ಸುನೀತಾ ವಿಲಿಯಮ್ಸ್ ರವರ ಸಾಹಸಗಾಥೆಯ ವಿವರ ನೀಡಿ, ಪ್ರತಿಭಾವಂತರಿಗಿರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು . ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಉಪಸ್ಥಿತರಿದ್ದರು. ಕು. ಅನುಶ್ರೀ, ಜೀವಶಾಸ್ತ್ರ ಉಪನ್ಯಾಸಕಿ, ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಹಾಗೂ 9 ವಲಯಗಳ ಆಶ್ರಯದಲ್ಲಿ ಆಟಿದ ಕಮ್ಮೆನ ಮತ್ತು ಆಟೋಟ ಸ್ಪರ್ಧೆ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya
error: Content is protected !!