25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ಖರೀದಿಸಲಾದ ಸುಮಾರು ಏಳು ಎಕರೆ ಪ್ರದೇಶದಲ್ಲಿ ಒಟ್ಟು 1.50 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ನಿರ್ಮಾಣಗೊಂಡ ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣವು ಮಾ.20ರಂದು ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಶುಭಾರಂಭಗೊಂಡಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, , ಹೇಮಾವತಿ ವೀ.ಹೆಗ್ಗಡೆ, ಡಿ.ಹಷೇ೯ಂದ್ರ ಕುಮಾರ್ ಸುಪ್ರೀಯ ಹಷೇ೯ಂದ್ರ ಕುಮಾರ್, ಶ್ರದ್ಧಾ ಅಮಿತ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾದ೯ನ್, ಸೋನಿಯಾ ವಮ೯, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ವಸತಿ ನಿಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರನ್ ವಮ೯, ಸಿರಿ ನಿದೇ೯ಶಕ ರಾಜೇಶ್ ಪೈ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ, ನಾಗೇಂದ್ರ ಗುರೂಜಿ, .ಡಾ.ಜಯಕುಮಾರ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು, ಸರ್ವ ಸದಸ್ಯರು ಮತ್ತು ಸಿರಿ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!