July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ಖರೀದಿಸಲಾದ ಸುಮಾರು ಏಳು ಎಕರೆ ಪ್ರದೇಶದಲ್ಲಿ ಒಟ್ಟು 1.50 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ನಿರ್ಮಾಣಗೊಂಡ ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣವು ಮಾ.20ರಂದು ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಶುಭಾರಂಭಗೊಂಡಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, , ಹೇಮಾವತಿ ವೀ.ಹೆಗ್ಗಡೆ, ಡಿ.ಹಷೇ೯ಂದ್ರ ಕುಮಾರ್ ಸುಪ್ರೀಯ ಹಷೇ೯ಂದ್ರ ಕುಮಾರ್, ಶ್ರದ್ಧಾ ಅಮಿತ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾದ೯ನ್, ಸೋನಿಯಾ ವಮ೯, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ವಸತಿ ನಿಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರನ್ ವಮ೯, ಸಿರಿ ನಿದೇ೯ಶಕ ರಾಜೇಶ್ ಪೈ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ, ನಾಗೇಂದ್ರ ಗುರೂಜಿ, .ಡಾ.ಜಯಕುಮಾರ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು, ಸರ್ವ ಸದಸ್ಯರು ಮತ್ತು ಸಿರಿ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya
error: Content is protected !!