23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

*ಉಜಿರೆ:ಮಾ20. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಆಯೋಜಿಸಿದ ಐಕ್ಸ್ (Association of ICSE and CBSE Schools) ದ್ವಿಮಾಸಿಕ ಸಭೆ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.

ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡದ ವಿವಿಧ ಐ.ಸಿ.ಎಸ್.ಇ ಹಾಗೂ ಸಿ.ಬಿ.ಎಸ್.ಇ ಶಾಲೆಯ ಪ್ರಾಂಶುಪಾಲರು ಭಾಗಿಯಾಗಿದ್ದು, ಐಕ್ಸ್ ಸಮಿತಿಯ ಮಾಹಿತಿಯನ್ನೊಳಗೊಂಡ ‘ರೆಡ್ ಬುಕ್’ ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಮನ್ಮೋಹನ್ ನಾಯ್ಕ್ ಕೆ.ಜಿ, ಉಡುಪಿಯ ಆನಂದತೀರ್ಥ ವಿದ್ಯಾಲಯದ ಪ್ರಾಂಶುಪಾಲೆ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಡಾ.ಗೀತಾ ಶಶಿಧರ್, ಮಂಗಳೂರಿನ ಸೈಂಟ್ ಡೋಮಿನಿಕ್ ಶಾಲೆಯ ಪ್ರಾಂಶುಪಾಲಕರು ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಮಂಗಳೂರು ವಿಭಾಗದ ಕ್ರೀಡಾ ಕಾರ್ಯದರ್ಶಿ ಫಾದರ್ ಅರುಣ್ ಡಿಸೋಜ ಹಾಗೂ ಉಡುಪಿ ಶಾರದಾ ರೆಸಿಡೆನ್ಸಿಯಲ್ ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಉಡುಪಿ ವಿಭಾಗದ ಕ್ರೀಡಾ ಕಾರ್ಯದರ್ಶಿ ಶ್ರೀ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya
error: Content is protected !!