July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಜೇಸಿ ಭವನದಲ್ಲಿ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಸಲಾಯಿತು.
ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ತರಬೇತುದಾರರಾಗಿ ವಲಯ ಉಪಾಧ್ಯಕ್ಷ ಜೆಎಫ್ಎಮ್ ರಂಜಿತ್ ಎಚ್‌ಡಿ ಇವರು ಜೆಸಿಐ ರಾಷ್ಟ್ರೀಯ ಮತ್ತು ವಲಯದ ಮಾರ್ಗದರ್ಶನ ಹಾಗೂ ಪದಾಧಿಕಾರಿಗಳ ಕರ್ತವ್ಯ ಮತ್ತು ಘಟಕದ ನಿರ್ವಹಣೆ ಕುರಿತು ತರಬೇತಿಯನ್ನು ನೀಡಿದರು.

ವೇದಿಕೆಯಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ ಮತ್ತು ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್ ಉಪಸ್ಥಿತರಿದ್ದರು.

ಜೇಸಿ ರಜತ್ ಮೋರ್ತಾಜೆ ಇವರು ವೇದಿಕೆ ಆಹ್ವಾನಿಸಿ, ಕಾರ್ಯಕ್ರಮ ಸಂಯೋಜಕ ಜೇಸಿ ರಕ್ಷಿತ್ ಅಂಡಿಂಜೆ ತರಬೇತುದಾರರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಜೇಸಿ ರಾಮಕೃಷ್ಣ ಶರ್ಮ ಧನ್ಯವಾದ ಸಲ್ಲಿಸಿದರು.

ಸಭಾಧ್ಯಕ್ಷರು ಸಭೆಯನ್ನು 3 ನೇ ಪದಾಧಿಕಾರಿಗಳ ಸಭೆಗೆ ಮುಂದೂಡಿದರು. ತರಬೇತಿ ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya
error: Content is protected !!