26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

ಬೆಳ್ತಂಗಡಿ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನವರು ಎರಡು ವಾಲಿಬಾಲ್ ಹಾಗೂ 2 ತ್ರೋಬಾಲ್ ಪೋಲ್ ಗಳನ್ನು ಕೊಡುಗೆಯಾಗಿ ನೀಡಿದರು.

ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಮ್ಯಾನೇಜರ್ ಶರುಣ್ ಪಿಂಟೋ ಹಾಗೂ ಸಿಬ್ಬಂದಿ ರಾಜೇಶ್ ಇವರು ನೇಲ್ಯಡ್ಕಕ್ಕೆ ಆಗಮಿಸಿ ಈ ಕೊಡುಗೆಯನ್ನು ಸಂಸ್ಥೆಗೆ ಹಸ್ತಾಂತರಿಸಿದರು. ಗ್ರಾಮೀಣ ಪ್ರದೇಶದಲ್ಲಿರುವ ಕನ್ನಡ ಮಾಧ್ಯಮ ಸರಕಾರಿ ಪ್ರೌಢಶಾಲೆಗೆ ಶಾಶ್ವತ ಕೊಡುಗೆಯನ್ನು ನೀಡಿದ ಎಂಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರಿಗೆ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.


ಎಸ್ ಡಿ ಎಂ ಸಿ ಯ ಯಶವಂತ ಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ವಿಜಯಕುಮಾರ್ ನಿರೂಪಿಸಿ, ಅರವಿಂದ ಗೋಖಲೆ ಸ್ವಾಗತಿಸಿ ಉದಯಕುಮಾರ್ ವಂದಿಸಿದರು.

ಈ ಸಮಾರಂಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!