33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

ಬೆಳ್ತಂಗಡಿ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿದ ಘಟನೆ ಅತ್ಯಂತ ಅಮಾನವೀಯವಾದುದು. ಇದು ನಾಗರಿಕ ಸಮಾಜದ ಅನಾಗರಿಕ ವರ್ತನೆಯ ಪರಮಾವಧಿಯಾಗಿದೆ. ವಿದ್ಯಾವಂತ ಜಿಲ್ಲೆಯಲ್ಲಿ , ಅಜ್ಞಾನಿಗಳು ಇನ್ನೂ ಜೀವಂತವಿರುವುದಕ್ಕೆ ಉತ್ತಮ ಉದಾಹರಣೆ. ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡುವ ಬದಲಾಗಿ ಘಟನೆಯನ್ನು ತಡೆಯಲು ಪ್ರಯತ್ನಿಸದಿರುವುದು ಮಾನವೀಯತೆ ಸತ್ತಿರುವುದಕ್ಕೆ ಸಾಕ್ಷಿ. ಘಟನೆಯಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮಲ್ಪೆ ಪೋಲಿಸರ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು . ಘಟನೆ ನಡೆದು ಒಂದು ದಿನ ತಡವಾಗಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ.

ಈ ಹಿಂದೆ ಬೆತ್ತಲೆ ಪ್ರಕರಣದಲ್ಲಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಘಟನೆಯ ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸುವ ಮೂಲಕ ಮತ್ತೊಮ್ಮೆ ಕರಾವಳಿಗರು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಬೇಕು. ಶೇಖರ್ ಲಾಯಿಲಸಂಚಾಲಕಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ