23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

ಬೆಳ್ತಂಗಡಿ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿದ ಘಟನೆ ಅತ್ಯಂತ ಅಮಾನವೀಯವಾದುದು. ಇದು ನಾಗರಿಕ ಸಮಾಜದ ಅನಾಗರಿಕ ವರ್ತನೆಯ ಪರಮಾವಧಿಯಾಗಿದೆ. ವಿದ್ಯಾವಂತ ಜಿಲ್ಲೆಯಲ್ಲಿ , ಅಜ್ಞಾನಿಗಳು ಇನ್ನೂ ಜೀವಂತವಿರುವುದಕ್ಕೆ ಉತ್ತಮ ಉದಾಹರಣೆ. ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡುವ ಬದಲಾಗಿ ಘಟನೆಯನ್ನು ತಡೆಯಲು ಪ್ರಯತ್ನಿಸದಿರುವುದು ಮಾನವೀಯತೆ ಸತ್ತಿರುವುದಕ್ಕೆ ಸಾಕ್ಷಿ. ಘಟನೆಯಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮಲ್ಪೆ ಪೋಲಿಸರ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು . ಘಟನೆ ನಡೆದು ಒಂದು ದಿನ ತಡವಾಗಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ.

ಈ ಹಿಂದೆ ಬೆತ್ತಲೆ ಪ್ರಕರಣದಲ್ಲಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಘಟನೆಯ ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸುವ ಮೂಲಕ ಮತ್ತೊಮ್ಮೆ ಕರಾವಳಿಗರು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಬೇಕು. ಶೇಖರ್ ಲಾಯಿಲಸಂಚಾಲಕಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya
error: Content is protected !!