September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

ಬೆಳ್ತಂಗಡಿ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿದ ಘಟನೆ ಅತ್ಯಂತ ಅಮಾನವೀಯವಾದುದು. ಇದು ನಾಗರಿಕ ಸಮಾಜದ ಅನಾಗರಿಕ ವರ್ತನೆಯ ಪರಮಾವಧಿಯಾಗಿದೆ. ವಿದ್ಯಾವಂತ ಜಿಲ್ಲೆಯಲ್ಲಿ , ಅಜ್ಞಾನಿಗಳು ಇನ್ನೂ ಜೀವಂತವಿರುವುದಕ್ಕೆ ಉತ್ತಮ ಉದಾಹರಣೆ. ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡುವ ಬದಲಾಗಿ ಘಟನೆಯನ್ನು ತಡೆಯಲು ಪ್ರಯತ್ನಿಸದಿರುವುದು ಮಾನವೀಯತೆ ಸತ್ತಿರುವುದಕ್ಕೆ ಸಾಕ್ಷಿ. ಘಟನೆಯಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮಲ್ಪೆ ಪೋಲಿಸರ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು . ಘಟನೆ ನಡೆದು ಒಂದು ದಿನ ತಡವಾಗಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ.

ಈ ಹಿಂದೆ ಬೆತ್ತಲೆ ಪ್ರಕರಣದಲ್ಲಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಘಟನೆಯ ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸುವ ಮೂಲಕ ಮತ್ತೊಮ್ಮೆ ಕರಾವಳಿಗರು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಬೇಕು. ಶೇಖರ್ ಲಾಯಿಲಸಂಚಾಲಕಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!