25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಚಿರತೆ ಓಡಾಟ ಕಂಡು ಬಂದಿದೆ.‌ ಮಾ.18 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಚಂದ್ಕೂರು ರಸ್ತೆಯ ನಿರ್ಪರಿ ಎಂಬಲ್ಲಿ ಸ್ಥಳೀಯರಾದ ಸಿಪ್ರಿಯನ್ ಎಂಬವರು ಮನೆ ಬಳಿಯ ರಸ್ತೆಯಲ್ಲಿ ಬರುತಿದ್ದಾಗ ದೊಡ್ಡ ಗಾತ್ರದ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಪಕ್ಕದ ಮನೆಯ ಸುನೀಲ್ ಎಂಬವರಿಗೆ ವಿಷಯ ತಿಳಿಸಿದಾಗ ಅವರು ಸ್ಥಳೀಯ ಪಂಚಾಯತ್ ಸದಸ್ಯ ಪ್ರಸಾದ್ ಅವರಿಗೆ ಈ ಬಗ್ಗೆ ಪೋನ್ ಮೂಲಕ ತಿಳಿಸಿದ್ದು, ಅವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತು‌ ಪತ್ತೆಯಾಗಿದೆ.‌

ಈ ಬಗ್ಗೆ ಹಂದೆವೂರು, ಅಮ್ಮನಂಗಡಿ, ನಿರ್ಪರಿ ಭಾಗದ ಕೆಲವು ಮನೆಗಳಿಗೆ ತೆರಳಿ ರಾತ್ರಿ ಹೊತ್ತು ಒಬ್ಬಂಟಿಯಾಗಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಅದಲ್ಲದೇ ಮತ್ತೊಮ್ಮೆ ಚಿರತೆ ಕಂಡು ಬಂದರೆ ಗೂಡು ಇಡುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದಾರೆ.‌ ಕಳೆದ ವರ್ಷ ಕೂಡ ಇದೇ ಸಮಯಗಳಲ್ಲಿ ಚಿರತೆ ಈ ಭಾಗದಲ್ಲಿ ಕಂಡು ಬಂದಿದ್ದು, ಕೆಲವು ಮನೆಗಳ ಸಾಕು ನಾಯಿಗಳನ್ನು ಹಿಡಿದಿದ್ದು ಮತ್ತೆ ಈ ಬಾರಿ ಚಿರತೆ ಸಂಚಾರ ಸ್ಥಳೀಯರನ್ನು ಚಿಂತೆಗೀಡು ಮಾಡಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya
error: Content is protected !!