22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಚಿರತೆ ಓಡಾಟ ಕಂಡು ಬಂದಿದೆ.‌ ಮಾ.18 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಚಂದ್ಕೂರು ರಸ್ತೆಯ ನಿರ್ಪರಿ ಎಂಬಲ್ಲಿ ಸ್ಥಳೀಯರಾದ ಸಿಪ್ರಿಯನ್ ಎಂಬವರು ಮನೆ ಬಳಿಯ ರಸ್ತೆಯಲ್ಲಿ ಬರುತಿದ್ದಾಗ ದೊಡ್ಡ ಗಾತ್ರದ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಪಕ್ಕದ ಮನೆಯ ಸುನೀಲ್ ಎಂಬವರಿಗೆ ವಿಷಯ ತಿಳಿಸಿದಾಗ ಅವರು ಸ್ಥಳೀಯ ಪಂಚಾಯತ್ ಸದಸ್ಯ ಪ್ರಸಾದ್ ಅವರಿಗೆ ಈ ಬಗ್ಗೆ ಪೋನ್ ಮೂಲಕ ತಿಳಿಸಿದ್ದು, ಅವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತು‌ ಪತ್ತೆಯಾಗಿದೆ.‌

ಈ ಬಗ್ಗೆ ಹಂದೆವೂರು, ಅಮ್ಮನಂಗಡಿ, ನಿರ್ಪರಿ ಭಾಗದ ಕೆಲವು ಮನೆಗಳಿಗೆ ತೆರಳಿ ರಾತ್ರಿ ಹೊತ್ತು ಒಬ್ಬಂಟಿಯಾಗಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಅದಲ್ಲದೇ ಮತ್ತೊಮ್ಮೆ ಚಿರತೆ ಕಂಡು ಬಂದರೆ ಗೂಡು ಇಡುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದಾರೆ.‌ ಕಳೆದ ವರ್ಷ ಕೂಡ ಇದೇ ಸಮಯಗಳಲ್ಲಿ ಚಿರತೆ ಈ ಭಾಗದಲ್ಲಿ ಕಂಡು ಬಂದಿದ್ದು, ಕೆಲವು ಮನೆಗಳ ಸಾಕು ನಾಯಿಗಳನ್ನು ಹಿಡಿದಿದ್ದು ಮತ್ತೆ ಈ ಬಾರಿ ಚಿರತೆ ಸಂಚಾರ ಸ್ಥಳೀಯರನ್ನು ಚಿಂತೆಗೀಡು ಮಾಡಿದೆ.

Related posts

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಷನ್ ಹಾಗೂ ಸಂದೀಪ್ ಕ್ರಿಯೇಶನ್ ರವರ ‘ಭರವಸೆಯ ಸೂಜಿದಾರ’ ಕಿರುಚಿತ್ರಕ್ಕೆ ಮುಹೂರ್ತ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya
error: Content is protected !!