September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಚಿರತೆ ಓಡಾಟ ಕಂಡು ಬಂದಿದೆ.‌ ಮಾ.18 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಚಂದ್ಕೂರು ರಸ್ತೆಯ ನಿರ್ಪರಿ ಎಂಬಲ್ಲಿ ಸ್ಥಳೀಯರಾದ ಸಿಪ್ರಿಯನ್ ಎಂಬವರು ಮನೆ ಬಳಿಯ ರಸ್ತೆಯಲ್ಲಿ ಬರುತಿದ್ದಾಗ ದೊಡ್ಡ ಗಾತ್ರದ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಪಕ್ಕದ ಮನೆಯ ಸುನೀಲ್ ಎಂಬವರಿಗೆ ವಿಷಯ ತಿಳಿಸಿದಾಗ ಅವರು ಸ್ಥಳೀಯ ಪಂಚಾಯತ್ ಸದಸ್ಯ ಪ್ರಸಾದ್ ಅವರಿಗೆ ಈ ಬಗ್ಗೆ ಪೋನ್ ಮೂಲಕ ತಿಳಿಸಿದ್ದು, ಅವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತು‌ ಪತ್ತೆಯಾಗಿದೆ.‌

ಈ ಬಗ್ಗೆ ಹಂದೆವೂರು, ಅಮ್ಮನಂಗಡಿ, ನಿರ್ಪರಿ ಭಾಗದ ಕೆಲವು ಮನೆಗಳಿಗೆ ತೆರಳಿ ರಾತ್ರಿ ಹೊತ್ತು ಒಬ್ಬಂಟಿಯಾಗಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಅದಲ್ಲದೇ ಮತ್ತೊಮ್ಮೆ ಚಿರತೆ ಕಂಡು ಬಂದರೆ ಗೂಡು ಇಡುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದಾರೆ.‌ ಕಳೆದ ವರ್ಷ ಕೂಡ ಇದೇ ಸಮಯಗಳಲ್ಲಿ ಚಿರತೆ ಈ ಭಾಗದಲ್ಲಿ ಕಂಡು ಬಂದಿದ್ದು, ಕೆಲವು ಮನೆಗಳ ಸಾಕು ನಾಯಿಗಳನ್ನು ಹಿಡಿದಿದ್ದು ಮತ್ತೆ ಈ ಬಾರಿ ಚಿರತೆ ಸಂಚಾರ ಸ್ಥಳೀಯರನ್ನು ಚಿಂತೆಗೀಡು ಮಾಡಿದೆ.

Related posts

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya
error: Content is protected !!