30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವಿದ್ಯಾರ್ಥಿನಿಯೊಬ್ಬಳಿಗೆ ಪರಿಚಯಸ್ಥ ವೇಣೂರು ಶಿವಾಜಿನಗರ ಕಾಲೋನಿ ನಿವಾಸಿ ಆಸ್ಟಕ್ (27) ಎಂಬಾತ ಮಾ. 19ರಂದು ಮೂಡುಬಿದ್ರೆಯಿಂದ ವೇಣೂರಿಗೆ ಬಸ್ಸಿನಲ್ಲಿ ಬರುವಾಗ ಆಕೆ ಕುಳಿತಿದ್ದ ಸೀಟಿನ ಬಳಿ ನಿಂತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬ್ಯಾಗ್ ಎಳೆದು ತೊಂದರೆ ನೀಡಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಘಟನೆ ವಿವರ: ವೇಣೂರು ನಿವಾಸಿ ಆಸ್ಪಕ್‌ ಎಂಬಾತನು ವಿದ್ಯಾರ್ಥಿಯಲ್ಲಿ ಹೆಚ್ಚಾಗಿ ಕಾಣ ಸಿಕ್ಕಿದವನು ಮಾತನಾಡುತ್ತಿದ್ದು ಆತಾನ ವರ್ತನೆ ಸರಿಯಿಲ್ಲದ ಕಾರಣ ವಿದ್ಯಾರ್ಥಿ ಸುಮಾರು 6 ತಿಂಗಳಿನಿಂದ ಆತನಲ್ಲಿ ಮಾತನಾಡುವುದನ್ನು ಬಿಟ್ಟಿದ್ದರೂ ಕೂಡ ಆತನು ಆಕೆ ಕಾಲೇಜಿಗೆ ಹೋಗುವ ಸಮಯ ಆಕೆಯನ್ನು ಹಿಂಬಾಲಿಸುತ್ತಿದ್ದು ಈ ವಿಚಾರವನ್ನು ವಿದ್ಯಾರ್ಥಿ ಅವರ ಮನೆಯಲ್ಲಿ ತಿಳಿಸಿದ್ದು ಆಕೆಯ ಮನೆಯವರು ಆತನಲ್ಲಿ ಆಕೆಯನ್ನು ಹಿಂಬಾಲಿಸದಂತೆ ಬುದ್ದಿ ಮಾತು ಕೂಡ ಹೇಳಿರುತ್ತಾರೆ.

ಮಾ. 19 ರಂದು ವಿದ್ಯಾರ್ಥಿನಿ ಕಾಲೇಜಿಗೆ ಹೋದವರು ಸಂಜೆ ವೇಳೆ ಬಸ್ಸಿನಲ್ಲಿ ವೇಣೂರಿಗೆ ಬರುವರೇ ಮೂಡಬಿದ್ರೆಯಿಂದ ಬಸ್‌ ಹತ್ತಿದ ಸಮಯ ಆಸ್ಪಕ್‌ ಕೂಡ ಆಕೆಯನ್ನು ಹಿಂಬಾಲಿಸಿ ಅದೇ ಬಸ್‌ ಹತ್ತಿ ಆಕೆಯು ಕುಳಿತುಕೊಂಡ ಸೀಟ್‌ ನ ಬಳಿ ನಿಂತುಕೊಂಡಿದ್ದು , ಬಸ್‌ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿಗೆ ತಲುಪಿದ ವೇಳೆ ಆಸ್ಪಕನು ವಿದ್ಯಾರ್ಥಿಯನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಕಾಲೇಜ್‌ ಬ್ಯಾಗ್‌ ಎಳೆದು ತೊಂದರೆ ನೀಡಿರುತ್ತಾನೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya
error: Content is protected !!