25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವಿದ್ಯಾರ್ಥಿನಿಯೊಬ್ಬಳಿಗೆ ಪರಿಚಯಸ್ಥ ವೇಣೂರು ಶಿವಾಜಿನಗರ ಕಾಲೋನಿ ನಿವಾಸಿ ಆಸ್ಟಕ್ (27) ಎಂಬಾತ ಮಾ. 19ರಂದು ಮೂಡುಬಿದ್ರೆಯಿಂದ ವೇಣೂರಿಗೆ ಬಸ್ಸಿನಲ್ಲಿ ಬರುವಾಗ ಆಕೆ ಕುಳಿತಿದ್ದ ಸೀಟಿನ ಬಳಿ ನಿಂತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬ್ಯಾಗ್ ಎಳೆದು ತೊಂದರೆ ನೀಡಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಘಟನೆ ವಿವರ: ವೇಣೂರು ನಿವಾಸಿ ಆಸ್ಪಕ್‌ ಎಂಬಾತನು ವಿದ್ಯಾರ್ಥಿಯಲ್ಲಿ ಹೆಚ್ಚಾಗಿ ಕಾಣ ಸಿಕ್ಕಿದವನು ಮಾತನಾಡುತ್ತಿದ್ದು ಆತಾನ ವರ್ತನೆ ಸರಿಯಿಲ್ಲದ ಕಾರಣ ವಿದ್ಯಾರ್ಥಿ ಸುಮಾರು 6 ತಿಂಗಳಿನಿಂದ ಆತನಲ್ಲಿ ಮಾತನಾಡುವುದನ್ನು ಬಿಟ್ಟಿದ್ದರೂ ಕೂಡ ಆತನು ಆಕೆ ಕಾಲೇಜಿಗೆ ಹೋಗುವ ಸಮಯ ಆಕೆಯನ್ನು ಹಿಂಬಾಲಿಸುತ್ತಿದ್ದು ಈ ವಿಚಾರವನ್ನು ವಿದ್ಯಾರ್ಥಿ ಅವರ ಮನೆಯಲ್ಲಿ ತಿಳಿಸಿದ್ದು ಆಕೆಯ ಮನೆಯವರು ಆತನಲ್ಲಿ ಆಕೆಯನ್ನು ಹಿಂಬಾಲಿಸದಂತೆ ಬುದ್ದಿ ಮಾತು ಕೂಡ ಹೇಳಿರುತ್ತಾರೆ.

ಮಾ. 19 ರಂದು ವಿದ್ಯಾರ್ಥಿನಿ ಕಾಲೇಜಿಗೆ ಹೋದವರು ಸಂಜೆ ವೇಳೆ ಬಸ್ಸಿನಲ್ಲಿ ವೇಣೂರಿಗೆ ಬರುವರೇ ಮೂಡಬಿದ್ರೆಯಿಂದ ಬಸ್‌ ಹತ್ತಿದ ಸಮಯ ಆಸ್ಪಕ್‌ ಕೂಡ ಆಕೆಯನ್ನು ಹಿಂಬಾಲಿಸಿ ಅದೇ ಬಸ್‌ ಹತ್ತಿ ಆಕೆಯು ಕುಳಿತುಕೊಂಡ ಸೀಟ್‌ ನ ಬಳಿ ನಿಂತುಕೊಂಡಿದ್ದು , ಬಸ್‌ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿಗೆ ತಲುಪಿದ ವೇಳೆ ಆಸ್ಪಕನು ವಿದ್ಯಾರ್ಥಿಯನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಕಾಲೇಜ್‌ ಬ್ಯಾಗ್‌ ಎಳೆದು ತೊಂದರೆ ನೀಡಿರುತ್ತಾನೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya
error: Content is protected !!