April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಸಂಜಾತೆ ಸುನೀತ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ರವರು ಬಾಹ್ಯಾಕಾಶ ದಿಂದ ನಿನ್ನೆ ಬೆಳಿಗ್ಗೆ 3.27 ಕ್ಕೆ ಭೂಮಿಗೆ ಬಂದಿಳಿದ ಐತಿಹಾಸಿಕ ಸಾಹಸದ ಕ್ಷಣದ ದೃಶ್ಯಗಳನ್ನು ಎಲ್ಲಾ ಮಕ್ಕಳಿಗೂ ತೋರಿಸಿ , ಸಾಧನೆ ತೋರಿದ ಈ ಸಾಧಕರಿಗೆ ಸಮಸ್ತ ವಿದ್ವತ್ ವಿದ್ಯಾರ್ಥಿ ಹಾಗೂ ಬೋಧಕ ಸಿಬ್ಬಂದಿ ಗೌರವ ಸೆಲ್ಯೂಟ್ ಸಮರ್ಪಣೆ ಮಾಡಿ, ಮಾ.20 ರಮದು ನಡೆದ ಕಾರ್ಯಕ್ರಮದಲ್ಲಿ ಅವರ ಸಾಧನೆಯನ್ನು ಕೊಂಡಾಡಿದರು.

ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಕ್ಕಳು ಅಭ್ಯಾಸ ಮಾಡುವ ಭೌತಶಾಸ್ತ್ರ ದ ಥಿಯರಿ ಹೇಗೆ ಉಪಯೋಗಿಸಲ್ಪಡುತ್ತದೆ , ಭೌತಶಾಸ್ತ್ರ ವಿಷಯ ತಜ್ಞ, ಅತುಕುರಿ ನರೇಶ್ ವಿವರಿಸಿದರೆ, ರಸಾಯನ ಶಾಸ್ತ್ರ ದಲ್ಲಿ ಮಕ್ಕಳು ಕಲಿಯುವ ಥಿಯರಿಗಳು ಹೇಗೆ ಉಪಯೋಗಿಸಲ್ಪಡುತ್ತವೆ ಎಂಬುದನ್ನು, ರಸಾಯನಶಾಸ್ತ್ರ ವಿಷಯತಜ್ಞ, ಪ್ರಥಾಪ್ ದೊಡ್ಡಮನೆ ಯವರು ವಿವರಿಸಿದರು. ವೈಜ್ಞಾನಿಕ ಕುತೂಹಲ ಮೂಡಿಸುವ ಪ್ರಮುಖ ಉದ್ದೇಶ ಹೊಂದಿರುವ ಇನ್ಸ್ಪೈರ್ ವಿದ್ವತ್ ವೇದಿಕೆ ಈ ಕಾರ್ಯಕ್ರಮ ಆಯೋಜಿಸಿತ್ತು.

ನಂತರ ಗ್ರೂಪ್ ಕ್ಯಾಪ್ಟನ್ ರಾಹುಲ್ ಸ್ವಾಮಿ ಗೌರವ ವಂದನೆಯ ಕಾರ್ಯಕ್ರಮ ನೆರವೇರಿಸಿದರು.

ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಯವರು ಸುನೀತಾ ವಿಲಿಯಮ್ಸ್ ರವರ ಸಾಹಸಗಾಥೆಯ ವಿವರ ನೀಡಿ, ಪ್ರತಿಭಾವಂತರಿಗಿರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು . ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಉಪಸ್ಥಿತರಿದ್ದರು. ಕು. ಅನುಶ್ರೀ, ಜೀವಶಾಸ್ತ್ರ ಉಪನ್ಯಾಸಕಿ, ಕಾರ್ಯಕ್ರಮ ನಿರೂಪಿಸಿದರು.

Related posts

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya
error: Content is protected !!