25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಸಂಜಾತೆ ಸುನೀತ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ರವರು ಬಾಹ್ಯಾಕಾಶ ದಿಂದ ನಿನ್ನೆ ಬೆಳಿಗ್ಗೆ 3.27 ಕ್ಕೆ ಭೂಮಿಗೆ ಬಂದಿಳಿದ ಐತಿಹಾಸಿಕ ಸಾಹಸದ ಕ್ಷಣದ ದೃಶ್ಯಗಳನ್ನು ಎಲ್ಲಾ ಮಕ್ಕಳಿಗೂ ತೋರಿಸಿ , ಸಾಧನೆ ತೋರಿದ ಈ ಸಾಧಕರಿಗೆ ಸಮಸ್ತ ವಿದ್ವತ್ ವಿದ್ಯಾರ್ಥಿ ಹಾಗೂ ಬೋಧಕ ಸಿಬ್ಬಂದಿ ಗೌರವ ಸೆಲ್ಯೂಟ್ ಸಮರ್ಪಣೆ ಮಾಡಿ, ಮಾ.20 ರಮದು ನಡೆದ ಕಾರ್ಯಕ್ರಮದಲ್ಲಿ ಅವರ ಸಾಧನೆಯನ್ನು ಕೊಂಡಾಡಿದರು.

ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಕ್ಕಳು ಅಭ್ಯಾಸ ಮಾಡುವ ಭೌತಶಾಸ್ತ್ರ ದ ಥಿಯರಿ ಹೇಗೆ ಉಪಯೋಗಿಸಲ್ಪಡುತ್ತದೆ , ಭೌತಶಾಸ್ತ್ರ ವಿಷಯ ತಜ್ಞ, ಅತುಕುರಿ ನರೇಶ್ ವಿವರಿಸಿದರೆ, ರಸಾಯನ ಶಾಸ್ತ್ರ ದಲ್ಲಿ ಮಕ್ಕಳು ಕಲಿಯುವ ಥಿಯರಿಗಳು ಹೇಗೆ ಉಪಯೋಗಿಸಲ್ಪಡುತ್ತವೆ ಎಂಬುದನ್ನು, ರಸಾಯನಶಾಸ್ತ್ರ ವಿಷಯತಜ್ಞ, ಪ್ರಥಾಪ್ ದೊಡ್ಡಮನೆ ಯವರು ವಿವರಿಸಿದರು. ವೈಜ್ಞಾನಿಕ ಕುತೂಹಲ ಮೂಡಿಸುವ ಪ್ರಮುಖ ಉದ್ದೇಶ ಹೊಂದಿರುವ ಇನ್ಸ್ಪೈರ್ ವಿದ್ವತ್ ವೇದಿಕೆ ಈ ಕಾರ್ಯಕ್ರಮ ಆಯೋಜಿಸಿತ್ತು.

ನಂತರ ಗ್ರೂಪ್ ಕ್ಯಾಪ್ಟನ್ ರಾಹುಲ್ ಸ್ವಾಮಿ ಗೌರವ ವಂದನೆಯ ಕಾರ್ಯಕ್ರಮ ನೆರವೇರಿಸಿದರು.

ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಯವರು ಸುನೀತಾ ವಿಲಿಯಮ್ಸ್ ರವರ ಸಾಹಸಗಾಥೆಯ ವಿವರ ನೀಡಿ, ಪ್ರತಿಭಾವಂತರಿಗಿರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು . ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಉಪಸ್ಥಿತರಿದ್ದರು. ಕು. ಅನುಶ್ರೀ, ಜೀವಶಾಸ್ತ್ರ ಉಪನ್ಯಾಸಕಿ, ಕಾರ್ಯಕ್ರಮ ನಿರೂಪಿಸಿದರು.

Related posts

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya
error: Content is protected !!