September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಸಂಜಾತೆ ಸುನೀತ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ರವರು ಬಾಹ್ಯಾಕಾಶ ದಿಂದ ನಿನ್ನೆ ಬೆಳಿಗ್ಗೆ 3.27 ಕ್ಕೆ ಭೂಮಿಗೆ ಬಂದಿಳಿದ ಐತಿಹಾಸಿಕ ಸಾಹಸದ ಕ್ಷಣದ ದೃಶ್ಯಗಳನ್ನು ಎಲ್ಲಾ ಮಕ್ಕಳಿಗೂ ತೋರಿಸಿ , ಸಾಧನೆ ತೋರಿದ ಈ ಸಾಧಕರಿಗೆ ಸಮಸ್ತ ವಿದ್ವತ್ ವಿದ್ಯಾರ್ಥಿ ಹಾಗೂ ಬೋಧಕ ಸಿಬ್ಬಂದಿ ಗೌರವ ಸೆಲ್ಯೂಟ್ ಸಮರ್ಪಣೆ ಮಾಡಿ, ಮಾ.20 ರಮದು ನಡೆದ ಕಾರ್ಯಕ್ರಮದಲ್ಲಿ ಅವರ ಸಾಧನೆಯನ್ನು ಕೊಂಡಾಡಿದರು.

ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಕ್ಕಳು ಅಭ್ಯಾಸ ಮಾಡುವ ಭೌತಶಾಸ್ತ್ರ ದ ಥಿಯರಿ ಹೇಗೆ ಉಪಯೋಗಿಸಲ್ಪಡುತ್ತದೆ , ಭೌತಶಾಸ್ತ್ರ ವಿಷಯ ತಜ್ಞ, ಅತುಕುರಿ ನರೇಶ್ ವಿವರಿಸಿದರೆ, ರಸಾಯನ ಶಾಸ್ತ್ರ ದಲ್ಲಿ ಮಕ್ಕಳು ಕಲಿಯುವ ಥಿಯರಿಗಳು ಹೇಗೆ ಉಪಯೋಗಿಸಲ್ಪಡುತ್ತವೆ ಎಂಬುದನ್ನು, ರಸಾಯನಶಾಸ್ತ್ರ ವಿಷಯತಜ್ಞ, ಪ್ರಥಾಪ್ ದೊಡ್ಡಮನೆ ಯವರು ವಿವರಿಸಿದರು. ವೈಜ್ಞಾನಿಕ ಕುತೂಹಲ ಮೂಡಿಸುವ ಪ್ರಮುಖ ಉದ್ದೇಶ ಹೊಂದಿರುವ ಇನ್ಸ್ಪೈರ್ ವಿದ್ವತ್ ವೇದಿಕೆ ಈ ಕಾರ್ಯಕ್ರಮ ಆಯೋಜಿಸಿತ್ತು.

ನಂತರ ಗ್ರೂಪ್ ಕ್ಯಾಪ್ಟನ್ ರಾಹುಲ್ ಸ್ವಾಮಿ ಗೌರವ ವಂದನೆಯ ಕಾರ್ಯಕ್ರಮ ನೆರವೇರಿಸಿದರು.

ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಯವರು ಸುನೀತಾ ವಿಲಿಯಮ್ಸ್ ರವರ ಸಾಹಸಗಾಥೆಯ ವಿವರ ನೀಡಿ, ಪ್ರತಿಭಾವಂತರಿಗಿರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು . ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಉಪಸ್ಥಿತರಿದ್ದರು. ಕು. ಅನುಶ್ರೀ, ಜೀವಶಾಸ್ತ್ರ ಉಪನ್ಯಾಸಕಿ, ಕಾರ್ಯಕ್ರಮ ನಿರೂಪಿಸಿದರು.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!