July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ವೇಣೂರು: ಅಕ್ರಮ-ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ನನ್ನಿಂದ ರೂ. 4.95 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಮೂಡುಕೋಡಿ ಗ್ರಾಮದ ವಿ.ಎ ಸುದೇಶ್ ಕುಮಾರ್ ಹಾಗೂ ಅವರ ಪತ್ನಿಯ ವಿರುದ್ದ ಆರೋಪ ಹೊರಿಸಿ, ಅದೇ ಗ್ರಾಮದ ನಿವಾಸಿ ರೋಯಿ ವರ್ಗೀಸ್ ಎಂಬವರು ವೇಣೂರು ಪೊಲೀಸ್ ಠಾಣೆಗೆ ಮಾ.19 ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ.


ರೋಯಿ ವರ್ಗೀಸ್ ಅವರು ಮೂಡುಕೋಡಿ ಗ್ರಾಮದಲ್ಲಿ ಪಟ್ಟಾ ಜಮೀನು ಹೊಂದಿದ್ದು ಅದಕ್ಕೆ ತಾಗಿಕೊಂಡಿರುವ ಕುಮ್ಕಿ ಜಮೀನಿಗೆ ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿ, ತಾನು ಸಹಕರಿಸುವುದಾಗಿ ಸುದೇಶ್ ಕುಮಾರ್ ತಿಳಿಸಿದ್ದಂತೆ ರೋಯಿ ವರ್ಗೀಸ್ ಅರ್ಜಿ ಸಲ್ಲಿಸಿದ್ದರು. ಸುದೇಶ್ ಕುಮಾರ್ 2023 ಮಾ. 22 ರಂದು ಸರ್ವೆ ನಂಬ್ರ: ೧೭೩/೩ ಮತ್ತು ೧೨೦/೩ ಆ೧ ರ ಸರ್ವೆ ನಡೆಸಿ ಲಂಚ ನೀಡಲು ಬೇಡಿಕೆ ಇಟ್ಟ ಮೇರೆಗೆ ರೋಯಿ ವರ್ಗೀಸ್ ಸುದೇಶ್ ಕುಮಾರ್ ಪತ್ನಿಯ ಬ್ಯಾಂಕ್ ಖಾತೆಗೆ ೨೦೨೩ ಮಾ. ೨೨ ರಂದು ರೂ. ೮೦ ಸಾವಿರ ಹಾಗೂ ತದನಂತರದ ದಿನಗಳಲ್ಲಿ ಒಟ್ಟು 5 ಸಲ ರೂ 4.55 ಲಕ್ಷ, ವರ್ಗಾವಣೆ ಮಾಡಿದ್ದು ಅಲ್ಲದೇ 2023 ಮಾ.22 ರಂದು ರೂ ೨೦ ಸಾವಿರ, ಹಾಗೂ ೨೦೨೩ ನ.೧೦ ರಂದು 5 ಸಾವಿರ ನಗದು ನೀಡಿದ್ದಲ್ಲದೇ, ೨೦೨೩ ನ. ೧೯ ರಂದು ಸುದೇಶ್ ಅವರ ಸೂಚನೆಯಂತೆ ಶರಣ್ ಶೆಟ್ಟಿ ಎಂಬವರ ಬ್ಯಾಂಕ್ ಖಾತೆಗೆ ಔತಣ ಕೂಟದ ಬಗ್ಗೆ 15 ಸಾವಿರ ರೂ ವರ್ಗಾಯಿಸಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.


ತದನಂತರ ಸುದೇಶ್ ಕುಮಾರ್ ಅವರು ನೀವು ನೀಡಿರುವ ಅಕ್ರಮ-ಸಕ್ರಮ ಜಮೀನು ಮಂಜೂರುಗೊಳಿಸಲು ಅದು ಅರಣ್ಯ ಇಲಾಖೆಗೆ ಸೇರಿರುವ ಜಮೀನು ಆಗಿರುವುದರಿಂದ ಸಾಧ್ಯವಿಲ್ಲ ಎಂದು ತಿಳಿಸಿದ್ದು, ತಾನು ನೀಡಿದ ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ ಸುದೇಶ್ ಕುಮಾರ್ ತಾನು ಯಾವುದೇ ಹಣವನ್ನು ನನ್ನ ಖಾತೆಗೆ ಸ್ವೀಕರಿಸಿಲ್ಲ, ನೀವು ಏನು ಬೇಕಾದರೂ ಮಾಡಿಕೊಳ್ಳಿ ಎಂದು ಹೇಳಿ ಒಟ್ಟು ೪.೯೫ ಲಕ್ಷ ರೂ ಪಡೆದು ಜಮೀನು ಅಕ್ರಮ ಸಕ್ರಮದಲ್ಲಿ ಮಂಜೂರುಗೊಳಿಸುವುದಾಗಿ ತಿಳಿಸಿ ಜಮೀನು ಮಂಜೂರು ಮಾಡಿಸಿಕೊಡದೇ ಹಾಗೂ ಹಣವನ್ನು ವಾಪಾಸು ನೀಡದೇ ವಂಚಿಸಿರುವುದಾಗಿ ಅಪಾದಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ೧೮೬೦ (u/s ೪೧೭, ೪೨೦) ಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!