September 6, 2026
Uncategorized

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25 ಕಾರ್ಯಕ್ರಮವು ಮಾ.21 ರಂದು ನಡೆಯಿತು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ಸುರತ್ಕಲ್ ಎಸ್.ಐ.ಟಿ.ಕೆ. ನಿರ್ದೇಶಕ ಪ್ರೊ. ಬಿ. ರವಿ ರವರು ಚಿಗುರು ಅನಾವರಣಗೊಳಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್.ಎಸ್., ಎಸ್.ಎನ್. ಕಾಕತ್ಕರ್, ಕುಮಾರ್ ಹೆಗ್ಡೆ, ಶಾಂತಿ ಪ್ರಸಾದ್, ಡಾ. ಶಲೀಫ್, ರಾಮಚಂದ್ರ ಪುರೋಹಿತ್, ತುಕಾರಾಂ ಸಾಲ್ಯಾನ್, ಸದಾನಂದ ಮುಂಡಾಜೆ, ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದರು.

ನಿವೃತ್ತ ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ, ರ್ಯಂಕ್ ವಿಜೇತರಿಗೆ, ಪಿ.ಹೆಚ್. ಪದವೀಧರರಿಗೆ, ವಿಶೇಷ ಸಾಧಕ ಅಧ್ಯಾಪಕರಿಗೆ ಗೌರವಿಸಲಾಯಿತು. ವಿಶೇಷ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ವಿಭಾಗದ ಸಾಧಕರಿಗೆ ಬಹುಮಾನ ವಿತರಿಸಲಾಯಿತು.ಈ ಸಂದರ್ಭದಲ್ಲಿ ಹೇಮಾವತಿ ವೀ. ಹೆಗ್ಗಡೆ, ಸೋನಿಯಾ ಯಶೋವರ್ಮ, ಪೂರನ್ ವರ್ಮಾ, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪಪ್ರಾಂಶುಪಾಲರಾದ ಶ್ರೀಮತಿ ನಂದಾಕುಮಾರಿ ವರದಿ ವಾಚಿಸಿದರು. ಪ್ರೊ. ಶ್ರೀಧರ ಎನ್. ಭಟ್ಟ, ಡಾ. ನೆಫಿಸತ್ ನಿರೂಪಿಸಿದರು.

Related posts

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya

ಬಳಂಜ ಶಾಲಾ ಪ್ರಾರಂಭೋತ್ಸವ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

Suddi Udaya
error: Content is protected !!