23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಮಂಗಳೂರು ಇದರ ಸಹಯೋಗದೊಂದಿಗೆ ‘ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನೋಂದಣಿ ಕಾರ್ಯಕ್ರಮ ಇಂದು (ಮಾ.21) ನಡೆಯಿತು.

ಸಂಪನ್ಮೂಲ ವ್ಯಕ್ತಿ, ದಕ್ಷಿಣ ಕನ್ನಡ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆಪ್ತ ಸಮಾಲೋಚಕಿ ಮತ್ತು ತರಬೇತುದಾರೆ ಮಂಜೂಷಾ ಪಿ. ಅವರು, ಕಾರ್ಯಕ್ರಮದ ಉದ್ದೇಶ, ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗ ನೋಂದಣಿ ಕ್ರಮ ಮತ್ತು ಅದರ ಪ್ರಯೋಜನದ ಬಗ್ಗೆ ತಿಳಿಸಿದರು.

ಉದ್ಯೋಗ ಮೇಳಗಳಲ್ಲಿ ಪ್ರಶ್ನೆಗೆ ಉತ್ತರಿಸಬೇಕಾದ ರೀತಿ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಬಗ್ಗೆ ಮುಂತಾದ ವಿಷಯಗಳ ಕುರಿತು ವಿಚಾರ ಹಂಚಿಕೊಂಡರು.

ನೋಂದಣಿ ಮಾಡಿಕೊಂಡ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಪೂರ್ಣಗೊಂಡ ಕೂಡಲೇ ಅಥವಾ ಪ್ರತೀ 3 ವರ್ಷಗಳಿಗೊಮ್ಮೆ ನೋಂದಣಿ ನವೀಕರಿಸಿಕೊಳ್ಳುವಂತೆ ಸೂಚಿಸಿದರು.

ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಅಫೀಜಾ ಕಾರ್ಯಕ್ರಮ ನಿರ್ವಹಿಸಿದರು. 40 ವಿದ್ಯಾರ್ಥಿನಿಯರು ಹೆಸರು ನೋಂದಾಯಿಸಿಕೊಂಡರು.

Related posts

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!