September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

ಕುವೆಟ್ಟು: ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ವಾಹನ ದಟ್ಟನೆ ಅಧಿಕವಾಗಿದ್ದು ವಿದ್ಯಾರ್ಥಿಗಳು ರಸ್ತೆ ದಾಟಲು ಹರಸಹಾಸ ಪಡುತ್ತಿದ್ದಾರೆ. ಸದ್ರಿ ಸ್ಥಳದಲ್ಲಿ ಬ್ಯಾರೀಕೆಟ್ ಇದ್ದರೂ ಅಳವಡಿಸಲು ಪೊಲೀಸ್ ಇಲಾಖೆ ಅನುಮತಿ ನೀಡುತ್ತಿಲ್ಲ. ಯಾವುದೇ ಟ್ರಾಫಿಕ್ ಪೊಲೀಸರನ್ನು ನಿಯೋಜಿಸುತ್ತಿಲ್ಲ. ಇದರಿಂದ ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದ್ದು ಅನಾಹುತ ನಡೆಯುವ ಮುನ್ನ ಸಂಬಂಧ ಪಟ್ಟ ಇಲಾಖೆ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಕುವೆಟ್ಟು ಗ್ರಾಮ ಸಭೆಯಲ್ಲಿ ಒತ್ತಾಯಿಸಿದರು.

ಕುವೆಟ್ಟು ಗ್ರಾಮ ಪಂಚಾಯತ್ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಾ.20 ರಂದು ಗ್ರಾ.ಪಂ. ಅಧ್ಯಕ್ಷೆ ಭಾರತಿ ರವರ ಅಧ್ಯಕ್ಷತೆಯಲ್ಲಿ ಪಣೆಜಾಲು ನಲಿಕೆ ಸಮುದಾಯ ಭವನದಲ್ಲಿ ನಡೆಯಿತು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೊಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಗುರುವಾಯನಕೆರೆಯ ನೀರು ಕಲುಷಿತ ಗೊಂಡಿದ್ದು,ಸರಿಪಡಿಸಲು ಗ್ರಾಮಸ್ಥರೊರ್ವರು ಒತ್ತಾಯಿಸಿದರು. ಕೆರೆಯನ್ನು ಮೀನು ಸಾಕಣಿಕೆಗೆ ಏಲಂ ಮಾಡಿರುವುದಾಗಿ ಅಧ್ಯಕ್ಷರು ತಿಳಿಸಿದರು.ಬಸ್ ಸ್ಟ್ಯಾಂಡ್,ಕುಡಿಯುವ ನೀರು,ರಸ್ತೆ ರಿಪೇರಿ ಹಾಗೂ ಗ್ರಾಮದ ಅಭಿವೃದ್ಧಿಗೆ ಬೆರಕಾದ ಹಲವಾರು ಚರ್ಚೆಗಳು ನಡೆದವು. ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಿಬ್ಬಂದಿ ಆನಂದ ಕೋಟ್ಯಾನ್ ವರದಿ ವಾಚಿಸಿದರು, ಪಿಡಿಒ ಇಮ್ತಿಯಾಜ್ ಸ್ವಾಗತಿಸಿದರು. ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಲಾಲ್ ,ಸದಸ್ಯರು ,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya
error: Content is protected !!