July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಮಂಗಳೂರು ಇದರ ಸಹಯೋಗದೊಂದಿಗೆ ‘ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನೋಂದಣಿ ಕಾರ್ಯಕ್ರಮ ಇಂದು (ಮಾ.21) ನಡೆಯಿತು.

ಸಂಪನ್ಮೂಲ ವ್ಯಕ್ತಿ, ದಕ್ಷಿಣ ಕನ್ನಡ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆಪ್ತ ಸಮಾಲೋಚಕಿ ಮತ್ತು ತರಬೇತುದಾರೆ ಮಂಜೂಷಾ ಪಿ. ಅವರು, ಕಾರ್ಯಕ್ರಮದ ಉದ್ದೇಶ, ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗ ನೋಂದಣಿ ಕ್ರಮ ಮತ್ತು ಅದರ ಪ್ರಯೋಜನದ ಬಗ್ಗೆ ತಿಳಿಸಿದರು.

ಉದ್ಯೋಗ ಮೇಳಗಳಲ್ಲಿ ಪ್ರಶ್ನೆಗೆ ಉತ್ತರಿಸಬೇಕಾದ ರೀತಿ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಬಗ್ಗೆ ಮುಂತಾದ ವಿಷಯಗಳ ಕುರಿತು ವಿಚಾರ ಹಂಚಿಕೊಂಡರು.

ನೋಂದಣಿ ಮಾಡಿಕೊಂಡ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಪೂರ್ಣಗೊಂಡ ಕೂಡಲೇ ಅಥವಾ ಪ್ರತೀ 3 ವರ್ಷಗಳಿಗೊಮ್ಮೆ ನೋಂದಣಿ ನವೀಕರಿಸಿಕೊಳ್ಳುವಂತೆ ಸೂಚಿಸಿದರು.

ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಅಫೀಜಾ ಕಾರ್ಯಕ್ರಮ ನಿರ್ವಹಿಸಿದರು. 40 ವಿದ್ಯಾರ್ಥಿನಿಯರು ಹೆಸರು ನೋಂದಾಯಿಸಿಕೊಂಡರು.

Related posts

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya
error: Content is protected !!