37.1 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

ಕುವೆಟ್ಟು: ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ವಾಹನ ದಟ್ಟನೆ ಅಧಿಕವಾಗಿದ್ದು ವಿದ್ಯಾರ್ಥಿಗಳು ರಸ್ತೆ ದಾಟಲು ಹರಸಹಾಸ ಪಡುತ್ತಿದ್ದಾರೆ. ಸದ್ರಿ ಸ್ಥಳದಲ್ಲಿ ಬ್ಯಾರೀಕೆಟ್ ಇದ್ದರೂ ಅಳವಡಿಸಲು ಪೊಲೀಸ್ ಇಲಾಖೆ ಅನುಮತಿ ನೀಡುತ್ತಿಲ್ಲ. ಯಾವುದೇ ಟ್ರಾಫಿಕ್ ಪೊಲೀಸರನ್ನು ನಿಯೋಜಿಸುತ್ತಿಲ್ಲ. ಇದರಿಂದ ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದ್ದು ಅನಾಹುತ ನಡೆಯುವ ಮುನ್ನ ಸಂಬಂಧ ಪಟ್ಟ ಇಲಾಖೆ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಕುವೆಟ್ಟು ಗ್ರಾಮ ಸಭೆಯಲ್ಲಿ ಒತ್ತಾಯಿಸಿದರು.

ಕುವೆಟ್ಟು ಗ್ರಾಮ ಪಂಚಾಯತ್ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಾ.20 ರಂದು ಗ್ರಾ.ಪಂ. ಅಧ್ಯಕ್ಷೆ ಭಾರತಿ ರವರ ಅಧ್ಯಕ್ಷತೆಯಲ್ಲಿ ಪಣೆಜಾಲು ನಲಿಕೆ ಸಮುದಾಯ ಭವನದಲ್ಲಿ ನಡೆಯಿತು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೊಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಗುರುವಾಯನಕೆರೆಯ ನೀರು ಕಲುಷಿತ ಗೊಂಡಿದ್ದು,ಸರಿಪಡಿಸಲು ಗ್ರಾಮಸ್ಥರೊರ್ವರು ಒತ್ತಾಯಿಸಿದರು. ಕೆರೆಯನ್ನು ಮೀನು ಸಾಕಣಿಕೆಗೆ ಏಲಂ ಮಾಡಿರುವುದಾಗಿ ಅಧ್ಯಕ್ಷರು ತಿಳಿಸಿದರು.ಬಸ್ ಸ್ಟ್ಯಾಂಡ್,ಕುಡಿಯುವ ನೀರು,ರಸ್ತೆ ರಿಪೇರಿ ಹಾಗೂ ಗ್ರಾಮದ ಅಭಿವೃದ್ಧಿಗೆ ಬೆರಕಾದ ಹಲವಾರು ಚರ್ಚೆಗಳು ನಡೆದವು. ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಿಬ್ಬಂದಿ ಆನಂದ ಕೋಟ್ಯಾನ್ ವರದಿ ವಾಚಿಸಿದರು, ಪಿಡಿಒ ಇಮ್ತಿಯಾಜ್ ಸ್ವಾಗತಿಸಿದರು. ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಲಾಲ್ ,ಸದಸ್ಯರು ,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya
error: Content is protected !!