22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

ಕುವೆಟ್ಟು: ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ವಾಹನ ದಟ್ಟನೆ ಅಧಿಕವಾಗಿದ್ದು ವಿದ್ಯಾರ್ಥಿಗಳು ರಸ್ತೆ ದಾಟಲು ಹರಸಹಾಸ ಪಡುತ್ತಿದ್ದಾರೆ. ಸದ್ರಿ ಸ್ಥಳದಲ್ಲಿ ಬ್ಯಾರೀಕೆಟ್ ಇದ್ದರೂ ಅಳವಡಿಸಲು ಪೊಲೀಸ್ ಇಲಾಖೆ ಅನುಮತಿ ನೀಡುತ್ತಿಲ್ಲ. ಯಾವುದೇ ಟ್ರಾಫಿಕ್ ಪೊಲೀಸರನ್ನು ನಿಯೋಜಿಸುತ್ತಿಲ್ಲ. ಇದರಿಂದ ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದ್ದು ಅನಾಹುತ ನಡೆಯುವ ಮುನ್ನ ಸಂಬಂಧ ಪಟ್ಟ ಇಲಾಖೆ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಕುವೆಟ್ಟು ಗ್ರಾಮ ಸಭೆಯಲ್ಲಿ ಒತ್ತಾಯಿಸಿದರು.

ಕುವೆಟ್ಟು ಗ್ರಾಮ ಪಂಚಾಯತ್ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಾ.20 ರಂದು ಗ್ರಾ.ಪಂ. ಅಧ್ಯಕ್ಷೆ ಭಾರತಿ ರವರ ಅಧ್ಯಕ್ಷತೆಯಲ್ಲಿ ಪಣೆಜಾಲು ನಲಿಕೆ ಸಮುದಾಯ ಭವನದಲ್ಲಿ ನಡೆಯಿತು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೊಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಗುರುವಾಯನಕೆರೆಯ ನೀರು ಕಲುಷಿತ ಗೊಂಡಿದ್ದು,ಸರಿಪಡಿಸಲು ಗ್ರಾಮಸ್ಥರೊರ್ವರು ಒತ್ತಾಯಿಸಿದರು. ಕೆರೆಯನ್ನು ಮೀನು ಸಾಕಣಿಕೆಗೆ ಏಲಂ ಮಾಡಿರುವುದಾಗಿ ಅಧ್ಯಕ್ಷರು ತಿಳಿಸಿದರು.ಬಸ್ ಸ್ಟ್ಯಾಂಡ್,ಕುಡಿಯುವ ನೀರು,ರಸ್ತೆ ರಿಪೇರಿ ಹಾಗೂ ಗ್ರಾಮದ ಅಭಿವೃದ್ಧಿಗೆ ಬೆರಕಾದ ಹಲವಾರು ಚರ್ಚೆಗಳು ನಡೆದವು. ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಿಬ್ಬಂದಿ ಆನಂದ ಕೋಟ್ಯಾನ್ ವರದಿ ವಾಚಿಸಿದರು, ಪಿಡಿಒ ಇಮ್ತಿಯಾಜ್ ಸ್ವಾಗತಿಸಿದರು. ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಲಾಲ್ ,ಸದಸ್ಯರು ,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಏ.9: ನಾವರದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯಿಂದ “ನಾಗರತಿ” ಯಕ್ಷಗಾನ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ರಾಜ್ಯದ ಅಡಿಕೆ ಲಾರಿಗಳು ಮಹಾರಾಷ್ಟ್ರದಲ್ಲಿ ಜಪ್ತಿ,ಕರಾವಳಿಯಲ್ಲಿ ಅಡಿಕೆ ಧಾರಣೆ ಕುಸಿತದ ಆತಂಕ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!