22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

ಬೆಳ್ತಂಗಡಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚಿಸಿದ ಘಟನೆ ಮಾ.19ರಂದು ವರದಿಯಾಗಿದೆ.

ಇಂದಬೆಟ್ಟು ಗ್ರಾಮದ ಕಜೆ ಶಾಂತಿನಗರ ನಿವಾಸಿ ಪುರುಷೋತ್ತಮ ರವರು ಮಡಂತ್ಯಾರು ಗ್ರೀನ್ ಪ್ರಾಲೇಶ್ ಬಾರ್ ನಲ್ಲಿ ಸಪ್ಲಾಯರ್ ಆಗಿ ಕೆಲಸ ಮಾಡಿಕೊಂಡಿದ್ದು , ಈ ಹಿಂದೆ ಆರ್.ಬಿ.ಎಲ್ ಬಜಾಜ್ ಫೈನಾನ್ಸ್ ನಿಂದ ಕ್ರೆಡಿಟ್ ಕಾರ್ಡ್ ಮಾಡಿಸಿದ್ದು ಇತ್ತೀಚಿಗೆ 35000 ಹಣ ಪಡೆದಿದ್ದು ಸದ್ರಿ ಹಣ ಕಾರ್ಡ್ ನಲ್ಲಿ ಇತ್ತು. ಮಾ.19 ರಂದು ಅಪರಿಚಿತ ನಂಬರ್ ನಿಂದ ಕರೆ ಬಂದಿದ್ದು ಆರ್ ,ಬಿ,ಎಲ್ ಬ್ಯಾಂಕಿನಿಂದ ಮೆನೇಜರ್ ಕರೆ ಮಾಡುತಿದ್ದು ನಿಮ್ಮ ಅಕೌಂಟಿನಲ್ಲಿ ಈಗ ಕಡಿಮೆ ಹಣ ಇದ್ದು ಅದಕ್ಕೆ ಹೆಚ್ಚು ಸಿಬಿಲ್ ಸ್ಕೋರ್ ಬರಬೇಕಾದರೆ 1 ಲಕ್ಷ ಹಣ ಬೇಕಾಗಿದ್ದು ನಿಮ್ಮ ಕಾರ್ಡ್ ನ್ನು ನಾನು ವಿಡಿಯೋ ಕಾಲ್ ಮಾಡಿ ಅಪ್ಡೇಟ್ ಮಾಡುತ್ತೇನೆ. ಅದಕ್ಕೆ ನಿಮ್ಮ ಕಾರ್ಡ್ ನ್ನು ತೋರಿಸಿ ನಾನು ಹೇಳಿದ ಹಾಗೆ ಅದರ ನಂಬ್ರಗಳನ್ನು ನನಗೆ ತಿಳಿಸಿ ಆಗ ನಿಮ್ಮ ಅಕೌಂಟಿಗೆ 1 ಲಕ್ಷ ಹಣ ಈಗಲೇ ಬರತ್ತದೆ. ಎಂದು ಹೇಳಿದಕ್ಕೆ ಪುರುಷೋತ್ತಮರವರು ನಂಬಿ ಕಾರ್ಡ್ ನ ಎಲ್ಲಾ ನಂಬ್ರಗಳನ್ನು ಹಾಗೂ ಆತ ಹೇಳಿದ ಹಾಗೆ ಓ.ಟಿ.ಪಿ ನಂಬ್ರಗಳನ್ನು ನೀಡಿದ್ದು, ಸ್ವಲ್ಪ ಹೊತ್ತಿನ ಬಳಿಕ ಪುರುಷೋತ್ತಮ ರವರ ಮೊಬೈಲಿಗೆ ಅಕೌಂಟಿನಲ್ಲಿದ್ದ ಹಣ 35000 / -ಕಡಿತವಾದ ಬಗ್ಗೆ ಸಂದೇಶ ಬಂದಿದ್ದು ಕೂಡಲೆ ಪುರುಷೋತ್ತಮ ರವರು ಮೋಸ ಹೋಗಿರುವ ಬಗ್ಗೆ ತಿಳಿದುಬಂದಿದೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಲ್.ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಹಿಳಾ ಶಕ್ತಿ ಸಂಘ ರಚನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
error: Content is protected !!