July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ವೇಣೂರು: ಅಕ್ರಮ-ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ನನ್ನಿಂದ ರೂ. 4.95 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಮೂಡುಕೋಡಿ ಗ್ರಾಮದ ವಿ.ಎ ಸುದೇಶ್ ಕುಮಾರ್ ಹಾಗೂ ಅವರ ಪತ್ನಿಯ ವಿರುದ್ದ ಆರೋಪ ಹೊರಿಸಿ, ಅದೇ ಗ್ರಾಮದ ನಿವಾಸಿ ರೋಯಿ ವರ್ಗೀಸ್ ಎಂಬವರು ವೇಣೂರು ಪೊಲೀಸ್ ಠಾಣೆಗೆ ಮಾ.19 ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ.


ರೋಯಿ ವರ್ಗೀಸ್ ಅವರು ಮೂಡುಕೋಡಿ ಗ್ರಾಮದಲ್ಲಿ ಪಟ್ಟಾ ಜಮೀನು ಹೊಂದಿದ್ದು ಅದಕ್ಕೆ ತಾಗಿಕೊಂಡಿರುವ ಕುಮ್ಕಿ ಜಮೀನಿಗೆ ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿ, ತಾನು ಸಹಕರಿಸುವುದಾಗಿ ಸುದೇಶ್ ಕುಮಾರ್ ತಿಳಿಸಿದ್ದಂತೆ ರೋಯಿ ವರ್ಗೀಸ್ ಅರ್ಜಿ ಸಲ್ಲಿಸಿದ್ದರು. ಸುದೇಶ್ ಕುಮಾರ್ 2023 ಮಾ. 22 ರಂದು ಸರ್ವೆ ನಂಬ್ರ: ೧೭೩/೩ ಮತ್ತು ೧೨೦/೩ ಆ೧ ರ ಸರ್ವೆ ನಡೆಸಿ ಲಂಚ ನೀಡಲು ಬೇಡಿಕೆ ಇಟ್ಟ ಮೇರೆಗೆ ರೋಯಿ ವರ್ಗೀಸ್ ಸುದೇಶ್ ಕುಮಾರ್ ಪತ್ನಿಯ ಬ್ಯಾಂಕ್ ಖಾತೆಗೆ ೨೦೨೩ ಮಾ. ೨೨ ರಂದು ರೂ. ೮೦ ಸಾವಿರ ಹಾಗೂ ತದನಂತರದ ದಿನಗಳಲ್ಲಿ ಒಟ್ಟು 5 ಸಲ ರೂ 4.55 ಲಕ್ಷ, ವರ್ಗಾವಣೆ ಮಾಡಿದ್ದು ಅಲ್ಲದೇ 2023 ಮಾ.22 ರಂದು ರೂ ೨೦ ಸಾವಿರ, ಹಾಗೂ ೨೦೨೩ ನ.೧೦ ರಂದು 5 ಸಾವಿರ ನಗದು ನೀಡಿದ್ದಲ್ಲದೇ, ೨೦೨೩ ನ. ೧೯ ರಂದು ಸುದೇಶ್ ಅವರ ಸೂಚನೆಯಂತೆ ಶರಣ್ ಶೆಟ್ಟಿ ಎಂಬವರ ಬ್ಯಾಂಕ್ ಖಾತೆಗೆ ಔತಣ ಕೂಟದ ಬಗ್ಗೆ 15 ಸಾವಿರ ರೂ ವರ್ಗಾಯಿಸಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.


ತದನಂತರ ಸುದೇಶ್ ಕುಮಾರ್ ಅವರು ನೀವು ನೀಡಿರುವ ಅಕ್ರಮ-ಸಕ್ರಮ ಜಮೀನು ಮಂಜೂರುಗೊಳಿಸಲು ಅದು ಅರಣ್ಯ ಇಲಾಖೆಗೆ ಸೇರಿರುವ ಜಮೀನು ಆಗಿರುವುದರಿಂದ ಸಾಧ್ಯವಿಲ್ಲ ಎಂದು ತಿಳಿಸಿದ್ದು, ತಾನು ನೀಡಿದ ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ ಸುದೇಶ್ ಕುಮಾರ್ ತಾನು ಯಾವುದೇ ಹಣವನ್ನು ನನ್ನ ಖಾತೆಗೆ ಸ್ವೀಕರಿಸಿಲ್ಲ, ನೀವು ಏನು ಬೇಕಾದರೂ ಮಾಡಿಕೊಳ್ಳಿ ಎಂದು ಹೇಳಿ ಒಟ್ಟು ೪.೯೫ ಲಕ್ಷ ರೂ ಪಡೆದು ಜಮೀನು ಅಕ್ರಮ ಸಕ್ರಮದಲ್ಲಿ ಮಂಜೂರುಗೊಳಿಸುವುದಾಗಿ ತಿಳಿಸಿ ಜಮೀನು ಮಂಜೂರು ಮಾಡಿಸಿಕೊಡದೇ ಹಾಗೂ ಹಣವನ್ನು ವಾಪಾಸು ನೀಡದೇ ವಂಚಿಸಿರುವುದಾಗಿ ಅಪಾದಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ೧೮೬೦ (u/s ೪೧೭, ೪೨೦) ಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಿಕಟ ಪೂರ್ವ ರಾಜಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಶ್ರೀ ರಾಮಸ್ವಾಮಿ(ವಿಸಿಎನ್ಆರ್ ಗ್ರೂಪ್) ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya
error: Content is protected !!