July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಮಂಗಳೂರು ಇದರ ಸಹಯೋಗದೊಂದಿಗೆ ‘ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನೋಂದಣಿ ಕಾರ್ಯಕ್ರಮ ಇಂದು (ಮಾ.21) ನಡೆಯಿತು.

ಸಂಪನ್ಮೂಲ ವ್ಯಕ್ತಿ, ದಕ್ಷಿಣ ಕನ್ನಡ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆಪ್ತ ಸಮಾಲೋಚಕಿ ಮತ್ತು ತರಬೇತುದಾರೆ ಮಂಜೂಷಾ ಪಿ. ಅವರು, ಕಾರ್ಯಕ್ರಮದ ಉದ್ದೇಶ, ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗ ನೋಂದಣಿ ಕ್ರಮ ಮತ್ತು ಅದರ ಪ್ರಯೋಜನದ ಬಗ್ಗೆ ತಿಳಿಸಿದರು.

ಉದ್ಯೋಗ ಮೇಳಗಳಲ್ಲಿ ಪ್ರಶ್ನೆಗೆ ಉತ್ತರಿಸಬೇಕಾದ ರೀತಿ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಬಗ್ಗೆ ಮುಂತಾದ ವಿಷಯಗಳ ಕುರಿತು ವಿಚಾರ ಹಂಚಿಕೊಂಡರು.

ನೋಂದಣಿ ಮಾಡಿಕೊಂಡ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಪೂರ್ಣಗೊಂಡ ಕೂಡಲೇ ಅಥವಾ ಪ್ರತೀ 3 ವರ್ಷಗಳಿಗೊಮ್ಮೆ ನೋಂದಣಿ ನವೀಕರಿಸಿಕೊಳ್ಳುವಂತೆ ಸೂಚಿಸಿದರು.

ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಅಫೀಜಾ ಕಾರ್ಯಕ್ರಮ ನಿರ್ವಹಿಸಿದರು. 40 ವಿದ್ಯಾರ್ಥಿನಿಯರು ಹೆಸರು ನೋಂದಾಯಿಸಿಕೊಂಡರು.

Related posts

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya
error: Content is protected !!