September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಮಂಗಳೂರು ಇದರ ಸಹಯೋಗದೊಂದಿಗೆ ‘ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನೋಂದಣಿ ಕಾರ್ಯಕ್ರಮ ಇಂದು (ಮಾ.21) ನಡೆಯಿತು.

ಸಂಪನ್ಮೂಲ ವ್ಯಕ್ತಿ, ದಕ್ಷಿಣ ಕನ್ನಡ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆಪ್ತ ಸಮಾಲೋಚಕಿ ಮತ್ತು ತರಬೇತುದಾರೆ ಮಂಜೂಷಾ ಪಿ. ಅವರು, ಕಾರ್ಯಕ್ರಮದ ಉದ್ದೇಶ, ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗ ನೋಂದಣಿ ಕ್ರಮ ಮತ್ತು ಅದರ ಪ್ರಯೋಜನದ ಬಗ್ಗೆ ತಿಳಿಸಿದರು.

ಉದ್ಯೋಗ ಮೇಳಗಳಲ್ಲಿ ಪ್ರಶ್ನೆಗೆ ಉತ್ತರಿಸಬೇಕಾದ ರೀತಿ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಬಗ್ಗೆ ಮುಂತಾದ ವಿಷಯಗಳ ಕುರಿತು ವಿಚಾರ ಹಂಚಿಕೊಂಡರು.

ನೋಂದಣಿ ಮಾಡಿಕೊಂಡ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಪೂರ್ಣಗೊಂಡ ಕೂಡಲೇ ಅಥವಾ ಪ್ರತೀ 3 ವರ್ಷಗಳಿಗೊಮ್ಮೆ ನೋಂದಣಿ ನವೀಕರಿಸಿಕೊಳ್ಳುವಂತೆ ಸೂಚಿಸಿದರು.

ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಅಫೀಜಾ ಕಾರ್ಯಕ್ರಮ ನಿರ್ವಹಿಸಿದರು. 40 ವಿದ್ಯಾರ್ಥಿನಿಯರು ಹೆಸರು ನೋಂದಾಯಿಸಿಕೊಂಡರು.

Related posts

ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಸಮಿತಿ ಸಮಾಲೋಚನಾ ಸಭೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya
error: Content is protected !!