March 22, 2025
Uncategorized

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25 ಕಾರ್ಯಕ್ರಮವು ಮಾ.21 ರಂದು ನಡೆಯಿತು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ಸುರತ್ಕಲ್ ಎಸ್.ಐ.ಟಿ.ಕೆ. ನಿರ್ದೇಶಕ ಪ್ರೊ. ಬಿ. ರವಿ ರವರು ಚಿಗುರು ಅನಾವರಣಗೊಳಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್.ಎಸ್., ಎಸ್.ಎನ್. ಕಾಕತ್ಕರ್, ಕುಮಾರ್ ಹೆಗ್ಡೆ, ಶಾಂತಿ ಪ್ರಸಾದ್, ಡಾ. ಶಲೀಫ್, ರಾಮಚಂದ್ರ ಪುರೋಹಿತ್, ತುಕಾರಾಂ ಸಾಲ್ಯಾನ್, ಸದಾನಂದ ಮುಂಡಾಜೆ, ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದರು.

ನಿವೃತ್ತ ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ, ರ್ಯಂಕ್ ವಿಜೇತರಿಗೆ, ಪಿ.ಹೆಚ್. ಪದವೀಧರರಿಗೆ, ವಿಶೇಷ ಸಾಧಕ ಅಧ್ಯಾಪಕರಿಗೆ ಗೌರವಿಸಲಾಯಿತು. ವಿಶೇಷ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ವಿಭಾಗದ ಸಾಧಕರಿಗೆ ಬಹುಮಾನ ವಿತರಿಸಲಾಯಿತು.ಈ ಸಂದರ್ಭದಲ್ಲಿ ಹೇಮಾವತಿ ವೀ. ಹೆಗ್ಗಡೆ, ಸೋನಿಯಾ ಯಶೋವರ್ಮ, ಪೂರನ್ ವರ್ಮಾ, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪಪ್ರಾಂಶುಪಾಲರಾದ ಶ್ರೀಮತಿ ನಂದಾಕುಮಾರಿ ವರದಿ ವಾಚಿಸಿದರು. ಪ್ರೊ. ಶ್ರೀಧರ ಎನ್. ಭಟ್ಟ, ಡಾ. ನೆಫಿಸತ್ ನಿರೂಪಿಸಿದರು.

Related posts

ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!