24.1 C
ಪುತ್ತೂರು, ಬೆಳ್ತಂಗಡಿ
May 7, 2025
Uncategorized

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25 ಕಾರ್ಯಕ್ರಮವು ಮಾ.21 ರಂದು ನಡೆಯಿತು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ಸುರತ್ಕಲ್ ಎಸ್.ಐ.ಟಿ.ಕೆ. ನಿರ್ದೇಶಕ ಪ್ರೊ. ಬಿ. ರವಿ ರವರು ಚಿಗುರು ಅನಾವರಣಗೊಳಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್.ಎಸ್., ಎಸ್.ಎನ್. ಕಾಕತ್ಕರ್, ಕುಮಾರ್ ಹೆಗ್ಡೆ, ಶಾಂತಿ ಪ್ರಸಾದ್, ಡಾ. ಶಲೀಫ್, ರಾಮಚಂದ್ರ ಪುರೋಹಿತ್, ತುಕಾರಾಂ ಸಾಲ್ಯಾನ್, ಸದಾನಂದ ಮುಂಡಾಜೆ, ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದರು.

ನಿವೃತ್ತ ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ, ರ್ಯಂಕ್ ವಿಜೇತರಿಗೆ, ಪಿ.ಹೆಚ್. ಪದವೀಧರರಿಗೆ, ವಿಶೇಷ ಸಾಧಕ ಅಧ್ಯಾಪಕರಿಗೆ ಗೌರವಿಸಲಾಯಿತು. ವಿಶೇಷ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ವಿಭಾಗದ ಸಾಧಕರಿಗೆ ಬಹುಮಾನ ವಿತರಿಸಲಾಯಿತು.ಈ ಸಂದರ್ಭದಲ್ಲಿ ಹೇಮಾವತಿ ವೀ. ಹೆಗ್ಗಡೆ, ಸೋನಿಯಾ ಯಶೋವರ್ಮ, ಪೂರನ್ ವರ್ಮಾ, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪಪ್ರಾಂಶುಪಾಲರಾದ ಶ್ರೀಮತಿ ನಂದಾಕುಮಾರಿ ವರದಿ ವಾಚಿಸಿದರು. ಪ್ರೊ. ಶ್ರೀಧರ ಎನ್. ಭಟ್ಟ, ಡಾ. ನೆಫಿಸತ್ ನಿರೂಪಿಸಿದರು.

Related posts

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya
error: Content is protected !!