23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25 ಕಾರ್ಯಕ್ರಮವು ಮಾ.21 ರಂದು ನಡೆಯಿತು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ಸುರತ್ಕಲ್ ಎಸ್.ಐ.ಟಿ.ಕೆ. ನಿರ್ದೇಶಕ ಪ್ರೊ. ಬಿ. ರವಿ ರವರು ಚಿಗುರು ಅನಾವರಣಗೊಳಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್.ಎಸ್., ಎಸ್.ಎನ್. ಕಾಕತ್ಕರ್, ಕುಮಾರ್ ಹೆಗ್ಡೆ, ಶಾಂತಿ ಪ್ರಸಾದ್, ಡಾ. ಶಲೀಫ್, ರಾಮಚಂದ್ರ ಪುರೋಹಿತ್, ತುಕಾರಾಂ ಸಾಲ್ಯಾನ್, ಸದಾನಂದ ಮುಂಡಾಜೆ, ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದರು.

ನಿವೃತ್ತ ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ, ರ್ಯಂಕ್ ವಿಜೇತರಿಗೆ, ಪಿ.ಹೆಚ್. ಪದವೀಧರರಿಗೆ, ವಿಶೇಷ ಸಾಧಕ ಅಧ್ಯಾಪಕರಿಗೆ ಗೌರವಿಸಲಾಯಿತು. ವಿಶೇಷ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ವಿಭಾಗದ ಸಾಧಕರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹೇಮಾವತಿ ವೀ. ಹೆಗ್ಗಡೆ, ಸೋನಿಯಾ ಯಶೋವರ್ಮ, ಪೂರನ್ ವರ್ಮಾ, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪಪ್ರಾಂಶುಪಾಲರಾದ ಶ್ರೀಮತಿ ನಂದಾಕುಮಾರಿ ವರದಿ ವಾಚಿಸಿದರು. ಪ್ರೊ. ಶ್ರೀಧರ ಎನ್. ಭಟ್ಟ, ಡಾ. ನೆಫಿಸತ್ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya
error: Content is protected !!