25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ 26ನೇ ವಾರ್ಷಿಕೋತ್ಸವವನ್ನು ಮಾ.22 ರಂದು ಸರಳವಾಗಿ ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು.


ಸಿಯೋನ್ ಪ್ರಾರ್ಥನಾಲಯದಲ್ಲಿ ದಿವ್ಯಬಲಿ ಪೂಜೆಯನ್ನು ತೋಟತ್ತಾಡಿ ಸೈಂಟ್ ಅಂತೋನಿಯವರ ದೇವಾಲಯದ ಧರ್ಮಗುರುಗಳಾದ ರೆ.ಫಾ.ಜೋಸ್ ಪೂವತ್ತಿಂಗಲ್ ರವರು ನೆರವೇರಿಸಿದರು.
ನಂತರ ಹಮ್ಮಿಕೊಂಡಿದ್ದ ಸಭಾಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ಅಲಂಕರಿಸಿದ್ದ ತೋಟತ್ತಾಡಿ ಸೈಂಟ್ ಅಂತೋನಿಯವರ ದೇವಾಲಯದ ಧರ್ಮಗುರುಗಳಾದ ರೆ.ಫಾ.ಜೋಸ್ ಪೂವತ್ತಿಂಗಲ್ ರವರು ವಾರ್ಷಿಕೋತ್ಸವಕ್ಕೆ ಶುಭಾಶೀರ್ವದಿಸಿ, ಮನುಷ್ಯನ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹೇಗೆ ಆಧ್ಯಾತ್ಮಿಕ, ದೈಹಿಕ ಮತ್ತು ಮಾನಸಿಕ ಚಿಕಿತ್ಸೆ ನೀಡಬಹುದು ಎಂಬುದರ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸುತ್ತಾ, ಸಿಯೋನ್ ಆಶ್ರಮದ ಈ ಸೇವೆ ಶ್ಲಾಘನೀಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ.ಯವರು, ಸಿಯೋನ್ ಅಶ್ರಮ ಬೆಳೆದು ಬಂದ ಹಾದಿಯನ್ನು, ನಿವಾಸಿಗಳ ಕಾರ್ಯಚಟುವಟಿಕೆಗಳನ್ನು ಮತ್ತು ಪ್ರಸ್ತುತ ಕಾರ್ಯವೈಖರಿಗಳ ಬಗ್ಗೆ ತಿಳಿಸಿದರು. ಸಂಸ್ಥೆಯ ಲೆಕ್ಕಾಧಿಕಾರಿ ಶ್ರೀಮತಿ ಸೌಮ್ಯ ಯು.ಪಿ.ಯವರು ಸಂಸ್ಥೆಯ ವಾರ್ಷಿಕ ವರದಿ ವಾಚಿಸಿದರು. ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದ ಸ್ವಾಮಿಯವರು ಸಂಸ್ಥೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ. ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್‌ರವರು, ಹಿತೈಷಿಗಳಾದ ಜೋಸೆಫ್ ಪಿ.ಪಿ., ಟ್ರಸ್ಟೀ ಸದಸ್ಯರುಗಳಾದ ಶ್ರೀಮತಿ ಮೇರಿ ಯು.ಪಿ., ಆಶ್ರಮದ ಫಲಾನುಭವಿಗಳಾದ ರಾಜ ಮತ್ತು ರಜನಿದೇವಿ ಶೆಟ್ಟಿಯವರು ವೇದಿಕೆಯನ್ನಲಂಕರಿಸಿದ್ದರು.

ವಾರ್ಷಿಕೋತ್ಸವದ ಅಂಗವಾಗಿ ಆಶ್ರಮ ನಿವಾಸಿಗಳಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಏರ್ಪಡಿಸಲಾಗಿದ್ದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಮತ್ತು ಅಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.
ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನಾವತಿಯವರು ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಮಿಷಾ ಕುರಿಯನ್ ರವರು ಸ್ವಾಗತಿಸಿ, ಸಿಬ್ಬಂದಿ ಸಿಂಧು ವಿ.ಎಂ.ರವರು ವಂದಿಸಿದರು.

Related posts

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!