25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

ಬೆಳ್ತಂಗಡಿ: ಪೆರ್ಮುಡ ಕಡೆಯಿಂದ ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ‌ಬಂಧಿಸಿ ಜಾನುವಾರುಗಳನ್ನು ವಶಪಡಿಸಿಕೊಂಡ ಪ್ರಕರಣ ಮಾ.22ರಂದು ವರದಿಯಾಗಿದೆ.

ಇಮ್ತೀಯಾಜ್‌ (29 ವರ್ಷ) ತಂದೆ: ಹಸನಬ್ಬ, ವಾಸ: ಕೋರ್ಟ್‌ ರಸ್ತೆ , ಸಂಜಯ ನಗರ,ಬೆಳ್ತಂಗಡಿ ಕಸಬಾ ಗ್ರಾಮ ಮತ್ತು
ರಮ್ಲ @ಆಸೀಪ್‌ ( 26 ವರ್ಷ) ತಂದೆ: ಅಬ್ದುಲ್‌ ರಹಿಮಾನ್‌, ವಾಸ: ಪಾದೆ ಮನೆ, ಪಡಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕು, ಬಂಧಿತ ಆರೋಪಿಗಳು.
ಘಟನೆ ವಿವರ:
ವೇಣೂರು ಪೊಲೀಸ್‌ ಠಾಣೆಯ ಎಸ್ .ಐ ಶ್ರೀ ಶೈಲ ಡಿ ಮುರುಗೋಡ್‌ ಅವರು ಮಾ.22ರಂದು ಸಿಬ್ಬಂದಿಗಳೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ ಬೆಳಿಗ್ಗೆ ಸುಮಾರು 11:45 ಕ್ಕೆ ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿಗೆ ತಲುಪುವಾಗ ಬಳಂಜ –ಪೆರ್ಮುಡ – ವೇಣೂರು ಸಾರ್ವಜನಿಕ ರಸ್ತೆಯಲ್ಲಿ ಪೆರ್ಮುಡ ಕಡೆಯಿಂದ ಒಂದು ಸೂಪರ್ ಕ್ಯಾರಿ ಟರ್ಬೋ ವಾಹನ ನೋಂದಣಿ ಸಂಖ್ಯೆ ಕೆ ಎ 20 ಎಎ 5887 ನೇ ದನ್ನು ನಿಲ್ಲಿಸಿ ತಪಾಸಣೆ ನಡೆಸುವ ಸಮಯ ಆರೋಪಿತರುಗಳು ಯಾವುದೇ ಪರವಾಣಿಗೆ ಇಲ್ಲದೇ ಅಕ್ರಮವಾಗಿ ಗೋವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿ ಸ್ವಾದೀನಪಡಿಸಿದ್ದಾರೆ. ಸ್ವಾಧೀನಪಡಿಸಿದ 3 ಜಾನುವಾರುಗಳ ಅಂದಾಜು ಮೌಲ್ಯ 15 ಸಾವಿರ ಹಾಗೂ ವಾಹನದಅಂದಾಜು ಮೌಲ್ಯ 2 ಲಕ್ಷ ವಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya
error: Content is protected !!