July 24, 2026
Uncategorized

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

ಬೆಳ್ತಂಗಡಿ: ಪೆರ್ಮುಡ ಕಡೆಯಿಂದ ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ‌ಬಂಧಿಸಿ ಜಾನುವಾರುಗಳನ್ನು ವಶಪಡಿಸಿಕೊಂಡ ಪ್ರಕರಣ ಮಾ.22ರಂದು ವರದಿಯಾಗಿದೆ.

ಇಮ್ತೀಯಾಜ್‌ (29 ವರ್ಷ) ತಂದೆ: ಹಸನಬ್ಬ, ವಾಸ: ಕೋರ್ಟ್‌ ರಸ್ತೆ , ಸಂಜಯ ನಗರ,ಬೆಳ್ತಂಗಡಿ ಕಸಬಾ ಗ್ರಾಮ ಮತ್ತು
ರಮ್ಲ @ಆಸೀಪ್‌ ( 26 ವರ್ಷ) ತಂದೆ: ಅಬ್ದುಲ್‌ ರಹಿಮಾನ್‌, ವಾಸ: ಪಾದೆ ಮನೆ, ಪಡಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕು, ಬಂಧಿತ ಆರೋಪಿಗಳು.
ಘಟನೆ ವಿವರ:
ವೇಣೂರು ಪೊಲೀಸ್‌ ಠಾಣೆಯ ಎಸ್ .ಐ ಶ್ರೀ ಶೈಲ ಡಿ ಮುರುಗೋಡ್‌ ಅವರು ಮಾ.22ರಂದು ಸಿಬ್ಬಂದಿಗಳೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ ಬೆಳಿಗ್ಗೆ ಸುಮಾರು 11:45 ಕ್ಕೆ ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿಗೆ ತಲುಪುವಾಗ ಬಳಂಜ –ಪೆರ್ಮುಡ – ವೇಣೂರು ಸಾರ್ವಜನಿಕ ರಸ್ತೆಯಲ್ಲಿ ಪೆರ್ಮುಡ ಕಡೆಯಿಂದ ಒಂದು ಸೂಪರ್ ಕ್ಯಾರಿ ಟರ್ಬೋ ವಾಹನ ನೋಂದಣಿ ಸಂಖ್ಯೆ ಕೆ ಎ 20 ಎಎ 5887 ನೇ ದನ್ನು ನಿಲ್ಲಿಸಿ ತಪಾಸಣೆ ನಡೆಸುವ ಸಮಯ ಆರೋಪಿತರುಗಳು ಯಾವುದೇ ಪರವಾಣಿಗೆ ಇಲ್ಲದೇ ಅಕ್ರಮವಾಗಿ ಗೋವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿ ಸ್ವಾದೀನಪಡಿಸಿದ್ದಾರೆ. ಸ್ವಾಧೀನಪಡಿಸಿದ 3 ಜಾನುವಾರುಗಳ ಅಂದಾಜು ಮೌಲ್ಯ 15 ಸಾವಿರ ಹಾಗೂ ವಾಹನದಅಂದಾಜು ಮೌಲ್ಯ 2 ಲಕ್ಷ ವಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya
error: Content is protected !!