ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ 26ನೇ ವಾರ್ಷಿಕೋತ್ಸವವನ್ನು ಮಾ.22 ರಂದು ಸರಳವಾಗಿ ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು.


ಸಿಯೋನ್ ಪ್ರಾರ್ಥನಾಲಯದಲ್ಲಿ ದಿವ್ಯಬಲಿ ಪೂಜೆಯನ್ನು ತೋಟತ್ತಾಡಿ ಸೈಂಟ್ ಅಂತೋನಿಯವರ ದೇವಾಲಯದ ಧರ್ಮಗುರುಗಳಾದ ರೆ.ಫಾ.ಜೋಸ್ ಪೂವತ್ತಿಂಗಲ್ ರವರು ನೆರವೇರಿಸಿದರು.
ನಂತರ ಹಮ್ಮಿಕೊಂಡಿದ್ದ ಸಭಾಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ಅಲಂಕರಿಸಿದ್ದ ತೋಟತ್ತಾಡಿ ಸೈಂಟ್ ಅಂತೋನಿಯವರ ದೇವಾಲಯದ ಧರ್ಮಗುರುಗಳಾದ ರೆ.ಫಾ.ಜೋಸ್ ಪೂವತ್ತಿಂಗಲ್ ರವರು ವಾರ್ಷಿಕೋತ್ಸವಕ್ಕೆ ಶುಭಾಶೀರ್ವದಿಸಿ, ಮನುಷ್ಯನ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹೇಗೆ ಆಧ್ಯಾತ್ಮಿಕ, ದೈಹಿಕ ಮತ್ತು ಮಾನಸಿಕ ಚಿಕಿತ್ಸೆ ನೀಡಬಹುದು ಎಂಬುದರ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸುತ್ತಾ, ಸಿಯೋನ್ ಆಶ್ರಮದ ಈ ಸೇವೆ ಶ್ಲಾಘನೀಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ.ಯವರು, ಸಿಯೋನ್ ಅಶ್ರಮ ಬೆಳೆದು ಬಂದ ಹಾದಿಯನ್ನು, ನಿವಾಸಿಗಳ ಕಾರ್ಯಚಟುವಟಿಕೆಗಳನ್ನು ಮತ್ತು ಪ್ರಸ್ತುತ ಕಾರ್ಯವೈಖರಿಗಳ ಬಗ್ಗೆ ತಿಳಿಸಿದರು. ಸಂಸ್ಥೆಯ ಲೆಕ್ಕಾಧಿಕಾರಿ ಶ್ರೀಮತಿ ಸೌಮ್ಯ ಯು.ಪಿ.ಯವರು ಸಂಸ್ಥೆಯ ವಾರ್ಷಿಕ ವರದಿ ವಾಚಿಸಿದರು. ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದ ಸ್ವಾಮಿಯವರು ಸಂಸ್ಥೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ. ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್‌ರವರು, ಹಿತೈಷಿಗಳಾದ ಜೋಸೆಫ್ ಪಿ.ಪಿ., ಟ್ರಸ್ಟೀ ಸದಸ್ಯರುಗಳಾದ ಶ್ರೀಮತಿ ಮೇರಿ ಯು.ಪಿ., ಆಶ್ರಮದ ಫಲಾನುಭವಿಗಳಾದ ರಾಜ ಮತ್ತು ರಜನಿದೇವಿ ಶೆಟ್ಟಿಯವರು ವೇದಿಕೆಯನ್ನಲಂಕರಿಸಿದ್ದರು.

ವಾರ್ಷಿಕೋತ್ಸವದ ಅಂಗವಾಗಿ ಆಶ್ರಮ ನಿವಾಸಿಗಳಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಏರ್ಪಡಿಸಲಾಗಿದ್ದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಮತ್ತು ಅಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.
ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನಾವತಿಯವರು ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಮಿಷಾ ಕುರಿಯನ್ ರವರು ಸ್ವಾಗತಿಸಿ, ಸಿಬ್ಬಂದಿ ಸಿಂಧು ವಿ.ಎಂ.ರವರು ವಂದಿಸಿದರು.

Related posts

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಜಲಮರುಪೂರಣ ಮಾಹಿತಿ ಮತ್ತು ಜಾಗೃತಿ: ದೇವಜಲ ನಮ್ಮೆಲ್ಲರ ಜೀವಜಲ; ವಂ.ಫಾ ವಾಲ್ಟರ್ ಡಿಮೆಲ್ಲೊ : ಬೋರ್ ವೆಲ್ ಜಲ ಮರುಪೂರಣದ ಮೂಲಕ 3 ತಿಂಗಳಿನಲ್ಲಿ ದಾಖಲೆಯ 28.6 ಲಕ್ಷ ಲೀಟರ್ ನೀರು ಭೂಗರ್ಭಕ್ಕೆ- ತಾಲೂಕಿನಲ್ಲಿಯೇ ಪ್ರಪ್ರಥಮ ಐತಿಹಾಸಿಕ ದಾಖಲೆ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!