22.3 C
ಪುತ್ತೂರು, ಬೆಳ್ತಂಗಡಿ
March 24, 2025
Uncategorized

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

ಬೆಳ್ತಂಗಡಿ: ಪೆರ್ಮುಡ ಕಡೆಯಿಂದ ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ‌ಬಂಧಿಸಿ ಜಾನುವಾರುಗಳನ್ನು ವಶಪಡಿಸಿಕೊಂಡ ಪ್ರಕರಣ ಮಾ.22ರಂದು ವರದಿಯಾಗಿದೆ.

ಇಮ್ತೀಯಾಜ್‌ (29 ವರ್ಷ) ತಂದೆ: ಹಸನಬ್ಬ, ವಾಸ: ಕೋರ್ಟ್‌ ರಸ್ತೆ , ಸಂಜಯ ನಗರ,ಬೆಳ್ತಂಗಡಿ ಕಸಬಾ ಗ್ರಾಮ ಮತ್ತು
ರಮ್ಲ @ಆಸೀಪ್‌ ( 26 ವರ್ಷ) ತಂದೆ: ಅಬ್ದುಲ್‌ ರಹಿಮಾನ್‌, ವಾಸ: ಪಾದೆ ಮನೆ, ಪಡಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕು, ಬಂಧಿತ ಆರೋಪಿಗಳು.
ಘಟನೆ ವಿವರ:
ವೇಣೂರು ಪೊಲೀಸ್‌ ಠಾಣೆಯ ಎಸ್ .ಐ ಶ್ರೀ ಶೈಲ ಡಿ ಮುರುಗೋಡ್‌ ಅವರು ಮಾ.22ರಂದು ಸಿಬ್ಬಂದಿಗಳೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ ಬೆಳಿಗ್ಗೆ ಸುಮಾರು 11:45 ಕ್ಕೆ ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿಗೆ ತಲುಪುವಾಗ ಬಳಂಜ –ಪೆರ್ಮುಡ – ವೇಣೂರು ಸಾರ್ವಜನಿಕ ರಸ್ತೆಯಲ್ಲಿ ಪೆರ್ಮುಡ ಕಡೆಯಿಂದ ಒಂದು ಸೂಪರ್ ಕ್ಯಾರಿ ಟರ್ಬೋ ವಾಹನ ನೋಂದಣಿ ಸಂಖ್ಯೆ ಕೆ ಎ 20 ಎಎ 5887 ನೇ ದನ್ನು ನಿಲ್ಲಿಸಿ ತಪಾಸಣೆ ನಡೆಸುವ ಸಮಯ ಆರೋಪಿತರುಗಳು ಯಾವುದೇ ಪರವಾಣಿಗೆ ಇಲ್ಲದೇ ಅಕ್ರಮವಾಗಿ ಗೋವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿ ಸ್ವಾದೀನಪಡಿಸಿದ್ದಾರೆ. ಸ್ವಾಧೀನಪಡಿಸಿದ 3 ಜಾನುವಾರುಗಳ ಅಂದಾಜು ಮೌಲ್ಯ 15 ಸಾವಿರ ಹಾಗೂ ವಾಹನದಅಂದಾಜು ಮೌಲ್ಯ 2 ಲಕ್ಷ ವಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾರಾವಿ ವಲಯ ಬಂಟರ ಸಂಘದ ಸಭೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya
error: Content is protected !!