ಬೆಳ್ತಂಗಡಿ: ಪೆರ್ಮುಡ ಕಡೆಯಿಂದ ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಜಾನುವಾರುಗಳನ್ನು ವಶಪಡಿಸಿಕೊಂಡ ಪ್ರಕರಣ ಮಾ.22ರಂದು ವರದಿಯಾಗಿದೆ.
ಇಮ್ತೀಯಾಜ್ (29 ವರ್ಷ) ತಂದೆ: ಹಸನಬ್ಬ, ವಾಸ: ಕೋರ್ಟ್ ರಸ್ತೆ , ಸಂಜಯ ನಗರ,ಬೆಳ್ತಂಗಡಿ ಕಸಬಾ ಗ್ರಾಮ ಮತ್ತು
ರಮ್ಲ @ಆಸೀಪ್ ( 26 ವರ್ಷ) ತಂದೆ: ಅಬ್ದುಲ್ ರಹಿಮಾನ್, ವಾಸ: ಪಾದೆ ಮನೆ, ಪಡಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕು, ಬಂಧಿತ ಆರೋಪಿಗಳು.
ಘಟನೆ ವಿವರ:
ವೇಣೂರು ಪೊಲೀಸ್ ಠಾಣೆಯ ಎಸ್ .ಐ ಶ್ರೀ ಶೈಲ ಡಿ ಮುರುಗೋಡ್ ಅವರು ಮಾ.22ರಂದು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುತ್ತಾ ಬೆಳಿಗ್ಗೆ ಸುಮಾರು 11:45 ಕ್ಕೆ ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿಗೆ ತಲುಪುವಾಗ ಬಳಂಜ –ಪೆರ್ಮುಡ – ವೇಣೂರು ಸಾರ್ವಜನಿಕ ರಸ್ತೆಯಲ್ಲಿ ಪೆರ್ಮುಡ ಕಡೆಯಿಂದ ಒಂದು ಸೂಪರ್ ಕ್ಯಾರಿ ಟರ್ಬೋ ವಾಹನ ನೋಂದಣಿ ಸಂಖ್ಯೆ ಕೆ ಎ 20 ಎಎ 5887 ನೇ ದನ್ನು ನಿಲ್ಲಿಸಿ ತಪಾಸಣೆ ನಡೆಸುವ ಸಮಯ ಆರೋಪಿತರುಗಳು ಯಾವುದೇ ಪರವಾಣಿಗೆ ಇಲ್ಲದೇ ಅಕ್ರಮವಾಗಿ ಗೋವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿ ಸ್ವಾದೀನಪಡಿಸಿದ್ದಾರೆ. ಸ್ವಾಧೀನಪಡಿಸಿದ 3 ಜಾನುವಾರುಗಳ ಅಂದಾಜು ಮೌಲ್ಯ 15 ಸಾವಿರ ಹಾಗೂ ವಾಹನದಅಂದಾಜು ಮೌಲ್ಯ 2 ಲಕ್ಷ ವಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.