22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

ಬೆಳ್ತಂಗಡಿ: ಪೆರ್ಮುಡ ಕಡೆಯಿಂದ ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ‌ಬಂಧಿಸಿ ಜಾನುವಾರುಗಳನ್ನು ವಶಪಡಿಸಿಕೊಂಡ ಪ್ರಕರಣ ಮಾ.22ರಂದು ವರದಿಯಾಗಿದೆ.

ಇಮ್ತೀಯಾಜ್‌ (29 ವರ್ಷ) ತಂದೆ: ಹಸನಬ್ಬ, ವಾಸ: ಕೋರ್ಟ್‌ ರಸ್ತೆ , ಸಂಜಯ ನಗರ,ಬೆಳ್ತಂಗಡಿ ಕಸಬಾ ಗ್ರಾಮ ಮತ್ತು
ರಮ್ಲ @ಆಸೀಪ್‌ ( 26 ವರ್ಷ) ತಂದೆ: ಅಬ್ದುಲ್‌ ರಹಿಮಾನ್‌, ವಾಸ: ಪಾದೆ ಮನೆ, ಪಡಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕು, ಬಂಧಿತ ಆರೋಪಿಗಳು.
ಘಟನೆ ವಿವರ:
ವೇಣೂರು ಪೊಲೀಸ್‌ ಠಾಣೆಯ ಎಸ್ .ಐ ಶ್ರೀ ಶೈಲ ಡಿ ಮುರುಗೋಡ್‌ ಅವರು ಮಾ.22ರಂದು ಸಿಬ್ಬಂದಿಗಳೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ ಬೆಳಿಗ್ಗೆ ಸುಮಾರು 11:45 ಕ್ಕೆ ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿಗೆ ತಲುಪುವಾಗ ಬಳಂಜ –ಪೆರ್ಮುಡ – ವೇಣೂರು ಸಾರ್ವಜನಿಕ ರಸ್ತೆಯಲ್ಲಿ ಪೆರ್ಮುಡ ಕಡೆಯಿಂದ ಒಂದು ಸೂಪರ್ ಕ್ಯಾರಿ ಟರ್ಬೋ ವಾಹನ ನೋಂದಣಿ ಸಂಖ್ಯೆ ಕೆ ಎ 20 ಎಎ 5887 ನೇ ದನ್ನು ನಿಲ್ಲಿಸಿ ತಪಾಸಣೆ ನಡೆಸುವ ಸಮಯ ಆರೋಪಿತರುಗಳು ಯಾವುದೇ ಪರವಾಣಿಗೆ ಇಲ್ಲದೇ ಅಕ್ರಮವಾಗಿ ಗೋವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿ ಸ್ವಾದೀನಪಡಿಸಿದ್ದಾರೆ. ಸ್ವಾಧೀನಪಡಿಸಿದ 3 ಜಾನುವಾರುಗಳ ಅಂದಾಜು ಮೌಲ್ಯ 15 ಸಾವಿರ ಹಾಗೂ ವಾಹನದಅಂದಾಜು ಮೌಲ್ಯ 2 ಲಕ್ಷ ವಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!