July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್.ಇಡಿ)ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆಯನ್ನು ಆಯೋಜಿಸಲಾಗಿತ್ತು.

ಕಾಲೇಜಿನ ಸಹಪ್ರಾಧ್ಯಾಪಕ ಮಂಜು ಆರ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ತರಬೇತಿಯ ರೂಪುರೇಷೆಗಳನ್ನು ತಿಳಿಸಿ, ಶಿಕ್ಷಕರ ಮತ್ತು ಪೋಷಕರ ನಡುವಿನ ಸಕಾರಾತ್ಮಕ ಸಂವಹನವು ಮಗುವಿನ ಕಲಿಕೆ ಮೇಲೆ ಪರಿಣಾಮ ಬೀರುವುದರೊಂದಿಗೆ ಕಲಿಕಾ ವ್ಯವಸ್ಥೆಯಲ್ಲಿ ಮಗುವಿನ ತೊಡಗಿಸಿಕೊಳ್ಳುವಿಕೆಯನ್ನು ಹೆಚ್ಚಿಸಲು ಮತ್ತು ಉತ್ತೇಜಿಸಲು ಸಹಾಯ ಮಾಡುತ್ತದೆ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಆರ್ಥಿಕ ಸಾಮಾಜಿಕ ಬೆಂಬಲದೊಂದಿಗೆ ಮಾನಸಿಕ ಬೆಂಬಲವನ್ನು ನೀಡಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಬೇಕೆಂದು ಹೇಳಿದರು.

ಮತ್ತೋರ್ವ ಸಹ ಪ್ರಾಧ್ಯಾಪಕ ತಿರುಮಲೇಶ್ ರಾವ್ ಮಾತನಾಡುತ್ತಾ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಕಲಿಕೆಯ ಜೊತೆಗೆ ಪೋಷಕ ಶಿಕ್ಷಕರ ಸಭೆಯು ಸಹ ಅತ್ಯಗತ್ಯ ಭಾಗವಾಗಿದೆ. ಪೋಷಕರಿಗೆ ತಮ್ಮ ಮಗುವಿನ ಶೈಕ್ಷಣಿಕ ಕಲಿಕೆಯ ಒಳನೋಟಗಳನ್ನು ಒದಗಿಸುವ ಮೂಲಕ ಅವರನ್ನು ಸಬಲೀಕರಣ ಗೊಳಿಸುತ್ತವೆ ಅಲ್ಲದೆ ಜೀವನದ ಕೌಶಲಗಳನ್ನು ಅಳವಡಿಸಿಕೊಳ್ಳಲು ಈ ಸಭೆಯು ಉತ್ತೇಜನ ನೀಡುತ್ತದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ್ ಸಲ್ಡಾನ ವಹಿಸಿ ಪೋಷಕರ ಶಿಕ್ಷಕರ ಸಂಘವು ಪೋಷಕರು ಮತ್ತು ಶಿಕ್ಷಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಕಾಲೇಜಿನಲ್ಲಿ ಪರಸ್ಪರ ಸಹಕಾರದ ಮೂಲಕ ಮಗು ತನ್ನ ಅಧ್ಯಯನದಿಂದ ಯಶಸ್ಸನ್ನು ಕಾಣಲು ಸಾಧ್ಯ, ಮಗುವಿನ ವಿವಿಧ ಕೌಶಲ್ಯಗಳು ಮತ್ತು ಸಾಮಾಜಿಕ, ಭಾವನಾತ್ಮಕ ಅಂಶಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪೋಷಕರು ಈ ಅಂಶಗಳ ಬಗ್ಗೆ ಕಾಲೇಜಿನ ಶಿಕ್ಷಕರೊಂದಿಗೆ ಚರ್ಚಿಸಿದಾಗ ಶಿಕ್ಷಕರು ಸುಧಾರಿಸಲು ಸಾಧ್ಯ. ಪೋಷಕರು ತಮ್ಮ ಮಕ್ಕಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವರ ಭಾವನೆಗಳನ್ನು ವ್ಯಕ್ತಪಡಿಸಲು ಸಮಯ ಮತ್ತು ಅವಕಾಶವನ್ನು ನೀಡಬೇಕು. ಪೋಷಕರ ಶಿಕ್ಷಕರ ಸಭೆಗಳು ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿ ತೋರಿಸಲು ಮಾತ್ರವಲ್ಲದೆ ಮೆಚ್ಚುಗೆಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಸಹ ಪ್ರಾಧ್ಯಾಪಕಿ ವಿದ್ಯಾಶ್ರೀ ಉಪಸ್ಥಿತರಿದ್ದರು ನಂತರ ಪೋಷಕರು ಮತ್ತು ಶಿಕ್ಷಕರ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಯಿತು.

ಪ್ರಶಿಕ್ಷಣಾರ್ಥಿ ಅಂಬಿಕಾ ಮತ್ತು ತಂಡದವರು ಪ್ರಾರ್ಥಿಸಿ , ಸಹ ಪ್ರಾಧ್ಯಾಪಕಿ ಅನುಷಾ ಡಿ.ಜೆ. ಸ್ವಾಗತಿಸಿ, ಪ್ರಿಯದರ್ಶಿನಿ ವಂದಿಸಿ, ಪ್ರಶಿಕ್ಷಣಾರ್ಥಿ ಅನುಷಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya
error: Content is protected !!